Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....