Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....