Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...