Homeಮುಖಪುಟಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ...

ಭೋಪಾಲ್ ಅನಿಲ ದುರಂತಕ್ಕೆ 37 ವರ್ಷಗಳು; ಸಂತ್ರಸ್ತರ ಹೋರಾಟ ಮುಂದುವರೆದಿದೆ…

- Advertisement -
- Advertisement -

ಭೋಪಾಲ್‌‌ ಅನಿಲ ದುರಂತ ನಡೆದು ಇಂದಿಗೆ 37 ವರ್ಷಗಳು ತುಂಬಿದೆ. ಸರ್ಕಾರವೇ ಒಪ್ಪಿಕೊಂಡಿರುವ ಹಾಗೆ ದುರಂತದಲ್ಲಿ ಮರಣ ಹೊಂದಿದವರು 3 ಸಾವಿರ ಜನರು. ಆದರೆ, ಅನಿಲ ದುರಂತ ಸಂತ್ರಸ್ತರ ಪ್ರಕಾರ ಅನಿಲ ಸೋರಿಕೆಯಿಂದ ಮೃತಪಟ್ಟವರು ಬರೋಬ್ಬರಿ 25 ಸಾವಿಕ್ಕೂ ಹೆಚ್ಚು. ಇದರಿಂದಾಗಿ ಗಾಯಗೊಂಡವರು ಮತ್ತು ವಿಕಲಚೇತನರಾದವರು 5.5 ಲಕ್ಷ ಜನರು. ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ದುರಂತದಿಂದ ಬದುಕುಳಿದ ಜನರು ಈಗಲೂ ತಮ್ಮ ವೈದ್ಯಕೀಯ ಆರೈಕೆ ಮತ್ತು ಪರಿಹಾರವನ್ನು ಪಡೆಯಲು ಹೋರಾಟ ನಡೆಸುತ್ತಲೇ ಇದ್ದಾರೆ.

1984 ರ ಡಿಸೆಂಬರ್ 2-3 ರ ಮಧ್ಯರಾತ್ರಿಯಲ್ಲಿ ಯೂನಿಯನ್ ಕಾರ್ಬೈಡ್ ಇಂಡಿಯಾ ಲಿಮಿಟೆಡ್ (UCIL) ಕೀಟನಾಶಕ ಕಾರ್ಖಾನೆಯಿಂದ ಸೋರಿಕೆಯಾದ ವಿಷಕಾರಿ ಅನಿಲಗಳು ಲಕ್ಷಾಂತರ ಜನರ ಬದುಕನ್ನೇ ನಾಶ ಮಾಡಿದೆ. ಆಶ್ಚರ್ಯ ಮತ್ತು ದುರಂತವೇನೆಂದರೆ ಈ ದುರಂತದ ಪ್ರಧಾನ ಆರೋಪಿ ವಾರೆನ್ ಆಂಡರ್ಸನ್‌ಗೆ ಶಿಕ್ಷೆ ಆಗಲೇ ಇಲ್ಲ. ಆತ ಘಟನೆ ನಡೆದ ನಂತರ ಭಾರತದಿಂದ ಪರಾರಿಯಾಗಿ ಅಮೆರಿಕಾದಲ್ಲಿ ತುಂಬು ಜೀವನ ನಡೆಸಿ ತನ್ನ 92 ನೇ ವರ್ಷದಲ್ಲಿ ಮರಣ ಹೊಂದಿದ. ಇತರ ಅಪರಾಧಿಗಳಿಗೆ ಕೇವಲ 2 ವರ್ಷಗಳ ಸಜೆ ಸಿಕ್ಕಿದೆ. ಉಳಿದಂತೆ ತಮ್ಮ ಬದುಕನ್ನೇ ಕಳೆದುಕೊಂಡ ಸಂತ್ರಸ್ಥರಿಗೆ ಸಿಕ್ಕ ಪರಿಹಾರ ಕೇವಲ 15 ಸಾವಿರ ರೂಪಾಯಿಗಳು ಮಾತ್ರ. ಅದು ಕೂಡಾ ಘಟನೆ ನಡೆದು 26 ವರ್ಷಗಳ ನಂತರ. ಅಂದರೆ ಸಿಕ್ಕ ಪರಿಹಾರದ ಲೆಕ್ಕ ದಿನಕ್ಕೆ ಪ್ರತಿಯೊಬ್ಬರಿಗೆ ಕೇವಲ ಒಂದುವರೆ ರುಪಾಯಿ!

ಇದನ್ನೂ ಓದಿ:ಶ್ರದ್ಧಾಂಜಲಿ: ಭೋಪಾಲ್ ಅನಿಲ ದುರಂತದ ಸಂತ್ರಸ್ತರ ದನಿ ಹಮೀದಾ ಬೀ

ದುರಂತದಲ್ಲಿ ತನ್ನ ಪತಿ ಮತ್ತು ಮಗಳು ಸೇರಿದಂತೆ ತನ್ನ ಕುಟುಂಬದ ಮೂವರು ಸದಸ್ಯರನ್ನು ಕಳೆದುಕೊಂಡ 64 ವರ್ಷದ ಅನಿಲ ಸಂತ್ರಸ್ತ ಮಹಿಳೆ ರಯೀಸಾ ಬಿ ಹೇಳುವಂತೆ, “ಆಹಾರ ಧಾನ್ಯಗಳು ಮತ್ತು ವೈದ್ಯಕೀಯ ಆರೈಕೆ, ಪರಿಹಾರ ಮತ್ತು ವಿಧವಾ ಪಿಂಚಣಿ ಇವೆಲ್ಲವೂ ನಮ್ಮ ಸುದೀರ್ಘ ಪ್ರತಿಭಟನೆಗಳು, ಮನವಿ ಪತ್ರಗಳನ್ನು ಸಲ್ಲಿಸಿದ ನಂತರವೇ ಬಂದಿವೆ. ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡುವುದು, ಅಧಿಕಾರಿಗಳು ಮತ್ತು ಮಂತ್ರಿಗಳೊಂದಿಗೆ ಭೇಟಿ ಮತ್ತು ಸ್ಥಳೀಯ ನ್ಯಾಯಾಲಯದಲ್ಲಿ (ಭೋಪಾಲ್‌ನಲ್ಲಿ), ಹೈಕೋರ್ಟ್ (ಜಬಲ್‌ಪುರದಲ್ಲಿ) ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳು. ಒಟ್ಟಿನಲ್ಲಿ ಅನಿಲ ಸಂತ್ರಸ್ತರ ಜೀವನವು ಫುಟ್‌ಬಾಲ್‌ನಂತೆಯೇ ಇರುತ್ತದೆ ಎಂದು ನಾನು ಭಾವಿಸುತ್ತೇನೆ” ಎನ್ನುತ್ತಾರೆ.

“ದುರದೃಷ್ಟವಶಾತ್, ದುರಂತದ ಮೂರೂವರೆ ದಶಕಗಳ ನಂತರವೂ, ರಾಜ್ಯ ಅಥವಾ ಒಕ್ಕೂಟ ಸರ್ಕಾರವು ವಿಪತ್ತಿನ ಪರಿಣಾಮಗಳ ಸಮಗ್ರ ಮೌಲ್ಯಮಾಪನವನ್ನು ಕೈಗೊಳ್ಳಲು ಅಥವಾ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಿಲ್ಲ” ಎಂದು ರಯೀಸಾ ಬಿ ಹೇಳುತ್ತಾರೆ. ಅವರು ಭೋಪಾಲ್ ಗ್ಯಾಸ್ ಪೀಡಿತ್ ಮಹಿಳಾ ಉದ್ಯೋಗ್ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ:ಭೋಪಾಲ್ ಅನಿಲ ದುರಂತ: ಇನ್ನೂ ನ್ಯಾಯಕ್ಕಾಗಿ ಕಾಯುತ್ತಿರುವ ಸಂತ್ರಸ್ತರು

ಇಷ್ಟೆಲ್ಲಾ ಆದ ನಂತರವು ನಮ್ಮ ಸರ್ಕಾರ ದುರಂತ ನಡೆದ ಕಾರ್ಖಾನೆಯನ್ನು ಮುಚ್ಚಿಲ್ಲ, ಅದು ಈಗ ಮತ್ತೊಂದು ಬಹುರಾಷ್ಟ್ರೀಯ ಕಂಪೆನಿಯಾದ ‘ಡವ್‌ ಕೆಮಿಕಲ್‌’ನ ಮಾಲಿಕತ್ವದಲ್ಲಿದೆ. ಈ ಕಂಪೆನಿಯು ಇದನ್ನು ಕೊಂಡುಕೊಳ್ಳುವಾಗ UCIL ನ ಯಾವುದೆ ಹೊಣೆಗಾರಿಕೆ ತಾನು ಹೊತ್ತುಕೊಳ್ಳುವುದಿಲ್ಲ ಎಂದು ಹೇಳಿಯೇ ಪಡೆದುಕೊಂಡಿದೆ.

2012 ಆಗಸ್ಟ್ 9 ರಂದು ಸುಪ್ರೀಂ ಕೋರ್ಟ್‌, ಅನಿಲ ಸಂತ್ರಸ್ತರಿಗೆ ಅತ್ಯುತ್ತಮ ವೈದ್ಯಕೀಯ ಸೇವೆಯನ್ನು ಒದಗಿಸಲು ಭಾರತ ಒಕ್ಕೂಟ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಆದರೆ ಇದನ್ನು ಜಾರಿಗೆ ತರಲು ಅನಿಲ ಸಂತ್ರಸ್ತರಿಗಾಗಿ ಕೆಲಸ ಮಾಡುವ ಸಂಘಟನೆಗಳು ಈಗಲೂ ಹೋರಾಟ ನಡೆಸುತ್ತಿವೆ. ಈ ಸಂಘಟನೆಗಳು ಇನ್ನೂ ಇತರ ಕೆಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ. ಎಲ್ಲಾ ನಿರ್ಗತಿಕ ಅನಿಲ ಸಂತ್ರಸ್ತರಿಗೆ, ವಿಶೇಷವಾಗಿ ವಿಧವೆಯರಿಗೆ ಸರಿಯಾದ ಪುನರ್ವಸತಿ ಕಲ್ಪಿಸಿಕೊಡುವುದು; ಸುರಕ್ಷಿತ ಕುಡಿಯುವ ನೀರಿನ ಪೂರೈಕೆ; ಉಚಿತ ವೈದ್ಯಕೀಯ ಆರೈಕೆ; ಕಲುಷಿತ ನೀರು ಮತ್ತು ವಿಷಕಾರಿ ತ್ಯಾಜ್ಯದ ಎಲ್ಲಾ ಸಂತ್ರಸ್ತರಿಗೆ ಪರಿಹಾರ; ಮತ್ತು ಆರೋಪಿಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವುದು ಈ ಬೇಡಿಕೆಗಳಲ್ಲಿ ಸೇರಿದೆ.

ಇದನ್ನೂ ಓದಿ:ಭೋಪಲ್ ಅನಿಲ ದುರಂತ; ವಿಷಪೂರಿತ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...