Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....