Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...