Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...