Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...