Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...