Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...