Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...