Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...