Homeಮುಖಪುಟಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ರಸ್ತೆ ಮತ್ತು ರೈಲು ಅಪಘಾತಗಳಿಂದ ಹಿಡಿದು ಹಸಿವು, ವೈದ್ಯಕೀಯ ಚಿಕಿತ್ಸೆ ನಿರಾಕರಣೆ, ಪೊಲೀಸ್ ದೌರ್ಜನ್ಯ, ಬಳಲಿಕೆ ಮತ್ತು ಆತ್ಮಹತ್ಯೆ ಸೇರಿದಂತೆ ಒಟ್ಟು 383 ಜನರು ಸಾವನ್ನಪ್ಪಿದ್ದಾರೆ ದಿ ವೈರ್‌ ವರದಿ ಮಾಡಿದೆ.

ಶುಕ್ರವಾರ ಮಧ್ಯಪ್ರದೇಶದ 16 ವಲಸೆ ಕಾರ್ಮಿಕರನ್ನು ಸರಕು ರೈಲು ಹರಿದು ಮೃತಪಟ್ಟಿದ್ದರು. ಇವರು ರಸ್ತೆಗಳಲ್ಲಿ ಪೊಲೀಸರ ಭಯಕ್ಕೆ ಹಾಗೂ ರೈಲುಗಳು ಓಡುವುದಿಲ್ಲ ಎಂದು ಭಾವಿಸಿ ರೈಲು ಹಳಿಯ ಉದ್ದಕ್ಕೂ ನಡೆದುಕೊಂಡು ಹೋಗುತ್ತಿದ್ದರು. ಇವರು ಮಹಾರಾಷ್ಟ್ರದ ಜಲ್ನಾದಲ್ಲಿರುವ ಖಾಸಗಿ ಉಕ್ಕಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾರ್ಚ್ 24 ರಂದು ಲಾಕ್‌ಡೌನ್ ಪ್ರಾರಂಭವಾದಾಗಿನಿಂದ ಅವರಿಗೆ ಸಂಬಳ ನೀಡಲಾಗುತ್ತಿರಲಿಲ್ಲ. ಇದರಿಂದಾಗಿ ಹತಾಶರಾದ ಅವರು ಮರಳಲು ಬಯಸಿ ಕಾಲ್ನಡಿಗೆಯನ್ನು ಪ್ರಾರಂಭಿಸಿದ್ದರು.

ಶನಿವಾರ ರಾತ್ರಿ ನಡೆದ ಮತ್ತೊಂದು ಘಟನೆಯಲ್ಲಿ, ಮಧ್ಯಪ್ರದೇಶದಲ್ಲಿ ಪ್ರಯಾಣಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಐದು ವಲಸೆ ಕಾರ್ಮಿಕರು ಸಾವನ್ನಪ್ಪಿದರು. ಸುಮಾರು 18 ಕಾರ್ಮಿಕರು ತೆಲಂಗಾಣದ ಹೈದರಾಬಾದ್ ನಗರದಿಂದ ಉತ್ತರ ಪ್ರದೇಶದ ಆಗ್ರಾಗೆ ಮಾವಿನಹಣ್ಣನ್ನು ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಎರಡು ಅಪಘಾತಗಳಲ್ಲಿ ಸಾವನ್ನಪ್ಪಿದ ಕಾರ್ಮಿಕರು ಮಾತ್ರವಲ್ಲದೆ ಇತರ ಕಾರಣಗಳಿಂದಾಗಿ ಕೂಡಾ ಲಾಕ್‌ಡೌನ್ ಸಮಯದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಂಶೋಧಕರಾದ ತೇಜೇಶ್ ಜಿಎನ್, ಕನಿಕಾ ಶರ್ಮಾ ಮತ್ತು ಅಮನ್ ಅವರ ಪ್ರಕಾರ, ಶನಿವಾರದವರೆಗೆ ರೋಗವನ್ನು ಹೊರತುಪಡಿಸಿ ಇತರ ಕಾರಣಗಳಿಂದಾಗಿ ಲಾಕ್‌ಡೌನ್‌ ವಿಧಿಸಿದಾಗಿನಿಂದ 378 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ, 69 ಜನರು ತಮ್ಮ ಮನೆಗಳಿಗೆ ಹೊರಟಾಗ ರೈಲು ಅಥವಾ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

“ಲಾಕ್ ಡೌನ್ ಆದ ತಕ್ಷಣ, ನಾವು ಸಾವಿನ ವರದಿಗಳನ್ನು ನೋಡಲಾರಂಭಿಸಿದೆವು. ಮನೆಗೆ ಹಿಂದಿರುಗುವಾಗ ಜನರು ಸಾಯುತ್ತಿದ್ದಾರೆ, ಆರೋಗ್ಯ ರಕ್ಷಣೆಯ ನಿರಾಕರಣೆಯಿಂದ ಮಹಿಳೆಯರು ಸಾಯುತ್ತಿದ್ದಾರೆ. ಈ ಸಾವುಗಳು ತುಂಬಾ ದುಃಖಕರವಾಗಿದ್ದವು ”ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಟ್ಲಾಂಟಾದ ಎಮೋರಿ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರದಲ್ಲಿ ಪಿಎಚ್‌ಡಿ ಓದುತ್ತಿರುವ ಶರ್ಮಾ ತಿಳಿಸಿದ್ದಾರೆ.

ಇವರ ಸಂಗ್ರಹಿಸಿದ ಮಾಹಿತಿಗೆ ಅನುಗುಣವಾಗಿ ಔರಂಗಾಬಾದ್‌ನಲ್ಲಿ 16 ವಲಸೆ ಕಾರ್ಮಿಕರ ಸಾವು ಒಂದೇ ದಿನದಲ್ಲಿ ಸಾವಿಗೀಡಾದವರ ಅತೀ ದೊಡ್ಡ ಘಟನೆಯಾಗಿದೆ. ಮಾರ್ಚ್ 28 ರಂದು ಲಾಕ್‌ಡೌನ್ ಘೋಷಿಸಿದ ಕೆಲವು ದಿನಗಳ ನಂತರ, ಕರ್ನಾಟಕದ ರಾಯಚೂರಿನಲ್ಲಿ ರಸ್ತೆ ಅಪಘಾತಕ್ಕೊಳಗಾಗಿ ಎಂಟು ಮಂದಿ ವಲಸಿಗ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಇಲ್ಲಿಯವರೆಗೆ ಅತಿ ಹೆಚ್ಚು ಸಂಖ್ಯೆಯ ಕೊರೊನಾ ವೈರಸ್ ಅಲ್ಲದ ಸಾವುಗಳು ಕೊರೊನಾ ವೈರಸಿನ ಭಯದ ಕಾರಣಕ್ಕಾಗಿ ಆತ್ಮಹತ್ಯೆ, ಮದ್ಯದ ಚಟವಿರುವವರು ಹಾಗೂ ಉದ್ಯೋಗ ನಷ್ಟ ಹೊಂದಿರುವ 83 ಜನರು ಮೃತಪಟ್ಟಿದ್ದಾರೆ. ಹಸಿವಿನಿಂದ, ಮನೆಗೆ ತೆರಳುವಾಗ, ಪಡಿತರ ಹಾಗೂ ಹಣಕ್ಕಾಗಿ ಸಾಲಿನಲ್ಲಿ ನಿಂತ ಬಳಲಿಕೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ್ದಾರೆ.

“ನಾವು ಗೂಗಲ್ ಹುಡುಕಾಟಗಳನ್ನು ಮಾಡುತ್ತೇವೆ ಹಾಗೂ ಜನರು ನಮಗೆ ವರದಿಗಳನ್ನು ಕಳುಹಿಸುತ್ತಿದ್ದಾರೆ. ನಾವು ಅವುಗಳನ್ನು ಪರಿಶೀಲಿಸುತ್ತೇವೆ. ಅವುಗಳನ್ನು ಭಾಷಾಂತರಿಸಲು ಸ್ವಯಂಸೇವಕರು ನಮಗೆ ಸಹಾಯ ಮಾಡುತ್ತಾರೆ” ಎಂದು ಶರ್ಮಾ ಹೇಳುತ್ತಾರೆ. ವಿಶ್ವಾಸಾರ್ಹ ಸುದ್ದಿ ಮೂಲಗಳಿಂದ ವರದಿಯಾದ ಸಾವುಗಳನ್ನು ಮಾತ್ರ ಈ ಸಂಶೋಧಕರು ಗಣನೆಗೆ ತೆಗೆದುಕೊಳ್ಳುತ್ತಾರೆ.

45 ದಿನಗಳ ಪೂರ್ವ ತಯಾರಿ ಇಲ್ಲದ ಲಾಕ್ ಡೌನ್ ನ ಕಾರಣಕ್ಕೆ ಮೃತರಾದವರ ಸಂಖ್ಯೆ : 383 ಜನರು

ಹಸಿವು ಮತ್ತು ಆರ್ಥಿಕ ಮುಗ್ಗಟ್ಟು- 47
ಹಸಿವಿನಿಂದ ಕಾಲ್ನಡಿಗೆಯಲ್ಲಿ ನಡೆದು ನಿತ್ರಾಣದಿಂದ – 26
ಪೋಲೀಸ್ ಮತ್ತು ಪ್ರಭುತ್ವದ ದೌರ್ಜನ್ಯ -12
ಸೂಕ್ತ ವೈದ್ಯಕೀಯ ಸೌಲಭ್ಯದ ಕೊರತೆ – 40
ಖಿನ್ನತೆ, ಆತಂಕದ ಕಾರಣಕ್ಕೆ ಆತ್ಮಹತ್ಯೆ – 83
ವಲಸೆ ಕಾರ್ಮಿಕರ ಕಾಲ್ನಡಿಗೆಯಲ್ಲಿ ರೈಲು, ವಾಹನ ಆಕ್ಸಿಡೆಂಟ್ ದುರಂತ – 74
ಲಾಕ್ ಡೌನ್ ಸಂದರ್ಭದ ಅಪರಾಧ – 14
ಮದ್ಯದ ಐಟದಿಂದಾಗಿ ಆತ್ಮಹತ್ಯೆ ಹಾಗೂ ಸಾವಿಗೀಡಾದವರು – 46
ಯಾವುದೇ ಮಾಹಿತಿ ಇಲ್ಲ – 41


ಇದನ್ನೂ ಓದಿ: ವಲಸೆ ಕಾರ್ಮಿಕರ ಈ ಸ್ಥಿತಿಗೆ ಕಾರಣವೇನು? ಅವರ ವಿಮೋಚನೆಯ ದಾರಿ ಯಾವುದು?


ವಿಡಿಯೊ ನೋಡಿ, ನಮ್ಮ ನಾನು ಗೌರಿ ಯೂಟ್ಯೂಬ್ ಚಾನೆಲ್‌ನಲ್ಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...