HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...