HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...