HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...