HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...