HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...