HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...