Homeಕರ್ನಾಟಕಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ಟೊಯೋಟಾ ಕಾರ್ಮಿಕರ ಸ್ವಾಭಿಮಾನಿ ಹೋರಾಟ 39 ನೇ ದಿನಕ್ಕೆ; ನಾಳೆ ಡಿಸಿ ಕಚೇರಿ ಮುತ್ತಿಗೆ

ಡಿಸೆಂಬರ್‌ 10 ರಂದು ಕಂಪೆನಿಯ ಗೇಟ್ ಮುಂಭಾಗ ಪ್ರತಿಭಟನಾ ನಿರತ ಕಾರ್ಮಿಕರು ಹಾಕಿದ್ದ ಪೆಂಡಾಲನ್ನು ಪೊಲೀಸರು ತೆರವುಗೊಳಿಸಿದ್ದರು, ಆದರೆ ಕಾರ್ಮಿಕರು ಅಲ್ಲೇ ’ಛತ್ರಿ ಚಳುವಳಿ’ ಪ್ರಾರಂಭಿಸಿದ್ದಾರೆ.

- Advertisement -
- Advertisement -

ಸರ್ಕಾರ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಮ್ಮ ಸಮಸ್ಯಗೆ ಸ್ಪಂದಿಸದೇ ಇರುವುದರಿಂದ ಟೊಯೋಟಾ ಕಾರ್ಮಿಕರು ನಾಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ಜಿಲ್ಲೆಯ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್‌‌ ಆಡಳಿತ ಮಂಡಳಿಯ ದುರ್ವರ್ತನೆ ವಿರುದ್ದ ಅಲ್ಲಿನ ಕಾರ್ಮಿಕರು ನಡೆಸುತ್ತಿರುವ ಹೋರಾಟ ಇಂದಿಗೆ 39 ನೇ ದಿನಕ್ಕೆ ಕಾಲಿಟ್ಟಿದೆ. ನಾಳಿನ ಮುತ್ತಿಗೆ ಕಾರ್ಯಕ್ರಮವನ್ನು ಕಾರ್ಮಿಕ, ರೈತ, ದಲಿತ, ಹಾಗೂ ಕನ್ನಡಪರ ಸಂಘಟನೆಗಳು ಟೊಯೊಟಾ ಕಾರ್ಮಿಕರನ್ನು ಬೆಂಬಲಿಸಿದ್ದು ಪ್ರತಿಭಟನೆಯ ಭಾಗವಾಗಲಿದ್ದಾರೆ ಎಂದು ಕಾರ್ಮಿಕ ಮುಖಂಡ ಗಂಗಾಧರ್‌ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಟೊಯೋಟಾ ಕಾರ್ಮಿಕ ಸಂಘಟನೆಯ ಮುಖಂಡ ಗಂಗಾಧರ್‌ ಅವರು, “ನಾಳೆ ಬೆಳಿಗ್ಗೆ 10:30 ರಾಮನಗರ ಜಿಲ್ಲಾಧಿಕಾರಿ ಕಚೇರಿಯನ್ನು ಮುತ್ತಿಗೆ ಹಾಕಲಿದ್ದೇವೆ. ನಮ್ಮ ಹೋರಾಟವನ್ನು ಇದುವರೆಗೂ ಬೆಂಬಲಿಸಿದ ಕಾರ್ಮಿಕ ಸಂಘಟನೆಗಳ ಒಕ್ಕೂಟ, ದಲಿತ, ರೈತ, ಕನ್ನಡ ಪರ ಸಂಘಟನೆಗಳು ನಮ್ಮೊಂದಿಗೆ ಸೇರಲಿದ್ದಾರೆ. ಇಂದು ಕೂಡಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದು ಅದೇನು ಫಲಕಾರಿಯಾಗುವ ಬಗ್ಗೆ ವಿಶ್ವಾಸವಿಲ್ಲ” ಎಂದರು.

ಡಿಸೆಂಬರ್‌ 10 ರಂದು ಕಂಪೆನಿಯ ಗೇಟ್ ಮುಂಭಾಗ ಪ್ರತಿಭಟನಾ ನಿರತ ಕಾರ್ಮಿಕರು ಹಾಕಿದ್ದ ಪೆಂಡಾಲನ್ನು ಪೊಲೀಸರು ತೆರವುಗೊಳಿಸಿದ್ದರು. ಕಾರ್ಮಿಕ ಸಂಘಟನೆಯು ಕಂಪೆನಿಯೂ ತಮ್ಮ ಪೆಂಡಾಲ್‌ ಅನ್ನು ಕುತಂತ್ರದಿಂದ ತೆರವುಗೊಳಿಸಿದೆ ಎಂದು ಆರೋಪಿಸಿ ಕಾರ್ಮಿಕರು ವಿನೂತನ “ಛತ್ರಿ ಚಳುವಳಿ” ಆರಂಭಿಸಿದ್ದರು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಯ ಆಡಳಿತ ಮಂಡಳಿ ತಮ್ಮ ಮೇಲೆ ನಡೆಸಿದ ದೌರ್ಜನ್ಯವನ್ನು ಪ್ರಶ್ನಿಸಿದ ಕಾರಣಕ್ಕಾಗಿ, ಕಂಪೆನಿಯು ಕಾರ್ಮಿಕರು ಮುಷ್ಕರ ಹೂಡಿದ್ದಾರೆ ಎಂದು ಆರೋಪಿಸಿ ಲಾಕೌಟ್ ಘೋಷಿಸಿತ್ತು. ಕಂಪೆನಿಯು ಇದುವರೆಗೂ ಒಟ್ಟು 60 ಕಾರ್ಮಿಕರನ್ನು ವಜಾ ಮಾಡಿದೆ.

ಈ ನಡುವೆ ರಾಜ್ಯ ಸರ್ಕಾರವು ಕೈಗಾರಿಕಾ ವಿವಾದ ಕಾಯ್ದೆ 1947 ಕಲಂ 10(3) ರ ಅಧಿಕಾರ ಬಳಿಸಿ ಕಾರ್ಮಿಕರು ಮುಷ್ಕರ ನಿಲ್ಲಿಸಬೇಕು ಮತ್ತು ಕಂಪೆನಿಯು ಲಾಕ್‌ಔಟ್‌‌ ತೆರವುಗೊಳಿಸಬೇಕೆಂದು ನವೆಂಬರ್‌ 18 ರಂದು ಆದೇಶ ಹೊರಡಿಸಿತ್ತು. ಆದರೆ ಕಾರ್ಮಿಕರು ತಮ್ಮ ಕರ್ತವ್ಯಕ್ಕೆ ತೆರಳುತ್ತೇವೆ ಎಂದು ಹೊರಟರೂ ಕಂಪೆನಿಯು ಅವರನ್ನು ಒಳಕ್ಕೆ ಬಿಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿದ್ದಾರೆ.

ಇದನ್ನೂ ಓದಿ: ಸಂಬಳ ಕೊಡದ ಆರೋಪ: ಐಫೋನ್ ತಯಾರಿಕ ನರಸಾಪುರದ ‘ವಿಸ್ಟ್ರಾನ್’ ಕಂಪನಿಗೆ ಬೆಂಕಿ ಹಚ್ಚಿದ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....