Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...