Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...