Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...