Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...