Homeಮುಖಪುಟಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

ಒಂದು ತಿಂಗಳಲ್ಲಿ 3ನೇ ಪ್ರಕರಣ: ಬಿಹಾರದಲ್ಲಿ ಕೊಚ್ಚಿಹೋದ ತಾತ್ಕಾಲಿಕ ಸೇತುವೆ

- Advertisement -
- Advertisement -

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ. ಸೇತುವೆಯ ವೀಡಿಯೊಗಳು ನೀರಿನ ಸುತ್ತಲಿನ ಸೇತುವೆಯ ಮೇಲೆ ಜನರು ಸಿಕ್ಕಿಬಿದ್ದಿರುವುದನ್ನು ತೋರಿಸುತ್ತದೆ. ಈ ಸೇತುವೆಯು ರಾಘೋಪುರವನ್ನು ವೈಶಾಲಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕಿಸುತ್ತದೆ ಎಂದು ಸುದ್ದಿ ಸಂಸ್ಥೆ ANI ಯ ವರದಿ ಮಾಡಿದೆ.

ಇದು ತಾತ್ಕಾಲಿಕ ಸೇತುವೆಯಾಗಿದ್ದು ಜೂನ್ 20ರೊಳಗೆ ಈ ಸೇತುವೆಯನ್ನು ತಗೆದುಹಾಕಬೇಕಿತ್ತು, ಆದರೆ ಬಿಹಾರದಲ್ಲಿ ಸುರಿಯುತ್ತಿರುವ ಮಾನ್ಸೂನ್ ಮಳೆಯಿಂದಾಗಿ ಸೆತುವೆ ತಗೆದುಹಾಕುವ ಕೆಲಸವು ವಿಳಂಬವಾಯಿತು ಎಂದು ಸ್ಥಳೀಯ ವರದಿಗಳು ಹೇಳಿವೆ.

ಈ ಘಟನೆ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದ್ದು, ಒಂದೇ ತಿಂಗಳಲ್ಲಿ ಮೂರನೇ ಸೇತುವೆಗೆ ಹಾನಿ ಎಂದು ಪೋಸ್ಟ್‌ ಮಾಡಿದ್ದಾರೆ. ಇನ್ನು ಕೆಲವರು ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ 12ನೇ ಸೇತುವೆ ಕುಸಿತ ಹಾಗೂ 2023ರಲ್ಲಿನ ಏಳನೇ ಸೇತುವೆ ಕುಸಿತ ಪ್ರಕರಣ ಇದಾಗಿದೆ.

  • ಜೂನ್ 4ರಂದು ಖಗಾರಿಯಾ ಜಿಲ್ಲೆ ಹಾಗೂ ಭಾಗಲ್ಪುರವನ್ನು ಸಂಪರ್ಕಿಸಬೇಕಿದ್ದ ನಿರ್ಮಾಣ ಹಂತದ ಸೇತುವೆ ಮುರಿದು ಬಿದ್ದಿತ್ತು. ಈ ದುರಂತವು ವಿಡಿಯೋದಲ್ಲಿ ಸೆರೆಯಾಗಿತ್ತು. ಒಬ್ಬ ಸೆಕ್ಯುರಿಟಿ ಗಾರ್ಡ್ ಅವಘಡದಲ್ಲಿ ಮೃತಪಟ್ಟಿದ್ದರು.
  • ಜೂನ್ 23ರಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆಯ ಭಾಗವೊಂದು ನೆಲಕಚ್ಚಿದೆ.
  • ಜೂನ್ 28ರಂದು ವೈಶಾಲಿ ಜಿಲ್ಲೆಯಲ್ಲಿ ಬಲವಾದ ಗಾಳಿ ಬೀಸಿದ್ದರಿಂದ ಗಂಗಾ ನದಿಗೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಸೇತುವೆಯ ಒಂದು ಭಾಗ ಕೊಚ್ಚಿ ಹೋಗಿದೆ.

2019ರ ನವೆಂಬರ್‌ನಲ್ಲಿಯೇ ಪೂರ್ಣಗೊಳ್ಳಬೇಕಿದ್ದ ಸೇತುವೆ ಕಾಮಗಾರಿ, ಗಡುವು ಮುಗಿದು ನಾಲ್ಕು ವರ್ಷಗಳಾದರೂ ಮುಗಿದಿರಲಿಲ್ಲ. ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ 3.16 ಕಿಮೀ ಉದ್ದದ, ನಾಲ್ಕು ಲೇನ್‌ನ ಈ ಸೇತುವೆ ಕುಸಿದು ಬಿದ್ದಿದ್ದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ್ದ ಬಿಹಾರ ಎಂಜಿನಿಯರಿಂಗ್ ಸೇವೆಗಳ ಸಂಸ್ಥೆ, ರಾಜ್ಯದಲ್ಲಿನ ಎಲ್ಲ ಸೇತುವೆಗಳ ರಚನಾತ್ಮಕ ಪರಿಶೀಲನೆ ಅಗತ್ಯವಿದೆ ಹಾಗೂ ನಿರ್ಮಾಣ ಹಂತದಲ್ಲಿರುವ ಸೇತುವೆಗಳ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದೆ.

ಕಿಶನ್‌ಗಂಜ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

ಶುಕ್ರವಾರ, ಬಿಹಾರದ ಕಿಶನ್‌ಗಂಜ್ ಜಿಲ್ಲೆಯ ಗೋರಿಚಕ್‌ನಲ್ಲಿ 100 ಮೀಟರ್ ನಿರ್ಮಾಣ ಹಂತದ ಸೇತುವೆ ಕುಸಿದಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಂಡು ನಾಲ್ವರು ಅಧಿಕಾರಿಗಳನ್ನು- ಇಬ್ಬರು ಎಂಜಿನಿಯರ್‌ಗಳು ಮತ್ತು ಇಬ್ಬರು ಯೋಜನಾ ವ್ಯವಸ್ಥಾಪಕರನ್ನು ಅಮಾನತುಗೊಳಿಸಿತು.

ರಾಜಧಾನಿ ಪಾಟ್ನಾದಿಂದ ಸುಮಾರು 400 ಕಿಮೀ ದೂರದಲ್ಲಿನ ರಾಷ್ಟ್ರೀಯ ಹೆದ್ದಾರಿ 327ಇ ಯಲ್ಲಿ ಈ ಘಟನೆ ನಡೆದಿದೆ. ಮೆಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಒಂದು ಪಿಲ್ಲರ್ ಕುಸಿದಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

“ಎನ್‌ಎಚ್- 327ಇ ವ್ಯಾಪ್ತಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಸೇತುವೆಯು ಪೂರ್ಣಗೊಂಡ ನಂತರ ಕಿಶನ್‌ಗಂಜ್ ಮತ್ತು ಕತಿಹಾರ್ ಪಟ್ಟಣಗಳನ್ನು ಸಂಪರ್ಕಿಸುತ್ತಿತ್ತು” ಎಂದು ಅವರು ತಿಳಿಸಿದ್ದಾರೆ.

”ಪ್ರಾಥಮಿಕ ತನಿಖೆಯ ಪ್ರಕಾರ, ಇತ್ತೀಚೆಗೆ ನೇಪಾಳದಿಂದ ಮೀಚಿ ನದಿಯಲ್ಲಿ ಹಠಾತ್ ನೀರಿನ ಹರಿವು ಕಂಡುಬಂದಿದ್ದರಿಂದ ಈ ಸೇತುವೆ ಕುಸಿತ ಕಂಡಿದೆ ಎಂದು ಹೇಳಲಾಗುತ್ತದೆ. ನಿರ್ಮಾಣ ಚಟುವಟಿಕೆಯ ಸಮಯದಲ್ಲಿ ಸಂಪೂರ್ಣ ನದಿಯನ್ನು P2-P3-P4 ಸ್ಪ್ಯಾನ್‌ಗಳ ಮೂಲಕ ಚಾನಲ್ ಮಾಡಲಾಗಿದೆ ಎಂದು ಹೆಚ್ಚಿನ ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ” ಎಂದು ಪ್ರಾದೇಶಿಕ ಅಧಿಕಾರಿ (NHAI) ಅಬ್ದೇಶ್ ಕುಮಾರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...