Homeರಾಷ್ಟ್ರೀಯಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಿದ್ದರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಮುಂಬೈ-ಗಾಂಧಿನಗರ ವಂದೇ ಭಾರತ್‌‌‌ ಎಕ್ಸ್‌ಪ್ರೆಸ್‌ ರೈಲು ಮಗದೊಮ್ಮೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗುಜರಾತ್‌ನ ಅತುಲ್ ನಿಲ್ದಾಣದ ಬಳಿ ಗೂಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಹೇಳಿದೆ.

ಈ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆಯುತ್ತಿರುವುದು ಇದು ಮೂರನೇ ಭಾರಿಯಾಗಿದೆ. ರೈಲು ಮುಂಬೈ ಸೆಂಟ್ರಲ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 8.17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಹಳಿ ಮೇಲೆ ದನಕರುಗಳು ಓಡಾಡಿದ್ದು, ಈ ವೇಳೆ ಗೂಳಿಗೆ ಡಿಕ್ಕಿ ಹೊಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಗಿದ್ದು, ರೈಲು ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಮುಂಬಾಗದ ಒಂದು ಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

“ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಒಂದು ಭಾಗದ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ದನಕರುಗಳು ಓಡಾಡುತ್ತಿರುವಾಗ, ಒಂದು ಗೂಳಿ ಡಿಕ್ಕಿ ಹೊಡೆದಿದೆ” ಎಂದು ಭಾರತೀಯ ರೈಲ್ವೇಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ಘಟನೆಯ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ರೈಲಿನ ವೇಗವನ್ನು ಗಂಟೆಗೆ 160 ಕಿಲೋಮೀಟರ್‌ಗೆ ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪಶ್ಚಿಮ ರೈಲ್ವೇ ಗಾಂಧಿನಗರ-ಅಹಮದಾಬಾದ್ ವಿಭಾಗದಲ್ಲಿ ಫೆನ್ಸಿಂಗ್ ಕೆಲಸವನ್ನು ಕೈಗೊಳ್ಳಲಿದೆ ಎಂದು ಸಿಪಿಆರ್‌ಒ ಹೇಳಿದ್ದಾರೆ. ಫೆನ್ಸಿಂಗ್ ಕೆಲಸ ಮಾರ್ಚ್ 2024 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...