Homeರಾಷ್ಟ್ರೀಯಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಿದ್ದರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಮುಂಬೈ-ಗಾಂಧಿನಗರ ವಂದೇ ಭಾರತ್‌‌‌ ಎಕ್ಸ್‌ಪ್ರೆಸ್‌ ರೈಲು ಮಗದೊಮ್ಮೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗುಜರಾತ್‌ನ ಅತುಲ್ ನಿಲ್ದಾಣದ ಬಳಿ ಗೂಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಹೇಳಿದೆ.

ಈ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆಯುತ್ತಿರುವುದು ಇದು ಮೂರನೇ ಭಾರಿಯಾಗಿದೆ. ರೈಲು ಮುಂಬೈ ಸೆಂಟ್ರಲ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 8.17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಹಳಿ ಮೇಲೆ ದನಕರುಗಳು ಓಡಾಡಿದ್ದು, ಈ ವೇಳೆ ಗೂಳಿಗೆ ಡಿಕ್ಕಿ ಹೊಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಗಿದ್ದು, ರೈಲು ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಮುಂಬಾಗದ ಒಂದು ಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

“ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಒಂದು ಭಾಗದ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ದನಕರುಗಳು ಓಡಾಡುತ್ತಿರುವಾಗ, ಒಂದು ಗೂಳಿ ಡಿಕ್ಕಿ ಹೊಡೆದಿದೆ” ಎಂದು ಭಾರತೀಯ ರೈಲ್ವೇಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ಘಟನೆಯ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ರೈಲಿನ ವೇಗವನ್ನು ಗಂಟೆಗೆ 160 ಕಿಲೋಮೀಟರ್‌ಗೆ ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪಶ್ಚಿಮ ರೈಲ್ವೇ ಗಾಂಧಿನಗರ-ಅಹಮದಾಬಾದ್ ವಿಭಾಗದಲ್ಲಿ ಫೆನ್ಸಿಂಗ್ ಕೆಲಸವನ್ನು ಕೈಗೊಳ್ಳಲಿದೆ ಎಂದು ಸಿಪಿಆರ್‌ಒ ಹೇಳಿದ್ದಾರೆ. ಫೆನ್ಸಿಂಗ್ ಕೆಲಸ ಮಾರ್ಚ್ 2024 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....