Homeರಾಷ್ಟ್ರೀಯಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಒಂದೇ ತಿಂಗಳಲ್ಲಿ 3ನೇ ಘಟನೆ: ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಗೂಳಿ ಡಿಕ್ಕಿ

ಸೆಪ್ಟೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಿದ್ದರು

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಉದ್ಘಾಟಿಸಿದ ಮುಂಬೈ-ಗಾಂಧಿನಗರ ವಂದೇ ಭಾರತ್‌‌‌ ಎಕ್ಸ್‌ಪ್ರೆಸ್‌ ರೈಲು ಮಗದೊಮ್ಮೆ ಜಾನುವಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಶನಿವಾರ ಬೆಳಿಗ್ಗೆ ಘಟನೆ ನಡೆದಿದ್ದು, ಗುಜರಾತ್‌ನ ಅತುಲ್ ನಿಲ್ದಾಣದ ಬಳಿ ಗೂಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಹೇಳಿದೆ.

ಈ ತಿಂಗಳಲ್ಲಿ ಇದೇ ರೀತಿಯ ಘಟನೆ ನಡೆಯುತ್ತಿರುವುದು ಇದು ಮೂರನೇ ಭಾರಿಯಾಗಿದೆ. ರೈಲು ಮುಂಬೈ ಸೆಂಟ್ರಲ್‌ನಿಂದ ಗಾಂಧಿನಗರಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 8.17ಕ್ಕೆ ಮುಂಬೈ ಸೆಂಟ್ರಲ್ ವಿಭಾಗದ ಅತುಲ್ ಬಳಿ ಹಳಿ ಮೇಲೆ ದನಕರುಗಳು ಓಡಾಡಿದ್ದು, ಈ ವೇಳೆ ಗೂಳಿಗೆ ಡಿಕ್ಕಿ ಹೊಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೈಲನ್ನು ಸುಮಾರು 15 ನಿಮಿಷಗಳ ಕಾಲ ತಡೆಹಿಡಿಯಲಾಗಿದ್ದು, ರೈಲು ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಿಂದಾಗಿ ರೈಲಿನ ಮುಂಬಾಗದ ಒಂದು ಭಾಗಕ್ಕೆ ಹಾನಿಯಾಗಿದೆ.

ಇದನ್ನೂ ಓದಿ: ಚೀನಾ ಲಿಂಕ್: 44 ಅರೆಹೈಸ್ಪೀಡ್ ವಂದೇ ಭಾರತ್‌ ರೈಲು ಟೆಂಡರ್‌‌ ರದ್ದು

“ಮುಂಭಾಗದ ಕೋಚ್ ಅಂದರೆ ಡ್ರೈವರ್ ಕೋಚ್‌ನ ಒಂದು ಭಾಗದ ಕವರ್‌ಗೆ ಹಾನಿಯಾಗಿರುವುದನ್ನು ಹೊರತುಪಡಿಸಿ ರೈಲಿಗೆ ಯಾವುದೇ ಹಾನಿಯಾಗಿಲ್ಲ. ರೈಲು ಸರಾಗವಾಗಿ ಚಲಿಸುತ್ತಿದೆ. ಅದನ್ನು ಆದಷ್ಟು ಬೇಗ ಸರಿಪಡಿಸಲಾಗುವುದು. ದನಕರುಗಳು ಓಡಾಡುತ್ತಿರುವಾಗ, ಒಂದು ಗೂಳಿ ಡಿಕ್ಕಿ ಹೊಡೆದಿದೆ” ಎಂದು ಭಾರತೀಯ ರೈಲ್ವೇಯ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

ಘಟನೆಯ ನಂತರ ರೈಲ್ವೆ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ಟ್ರ್ಯಾಕ್ ಬಳಿ ಬಿಡದಂತೆ ಹತ್ತಿರದ ಗ್ರಾಮಸ್ಥರಿಗೆ ಸಲಹೆ ನೀಡಲು ಪ್ರಯತ್ನಿಸುತ್ತಿದ್ದಾರೆ.

ರೈಲಿನ ವೇಗವನ್ನು ಗಂಟೆಗೆ 160 ಕಿಲೋಮೀಟರ್‌ಗೆ ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಪಶ್ಚಿಮ ರೈಲ್ವೇ ಗಾಂಧಿನಗರ-ಅಹಮದಾಬಾದ್ ವಿಭಾಗದಲ್ಲಿ ಫೆನ್ಸಿಂಗ್ ಕೆಲಸವನ್ನು ಕೈಗೊಳ್ಳಲಿದೆ ಎಂದು ಸಿಪಿಆರ್‌ಒ ಹೇಳಿದ್ದಾರೆ. ಫೆನ್ಸಿಂಗ್ ಕೆಲಸ ಮಾರ್ಚ್ 2024 ರೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸರಣಿಯ ಮೂರನೇ ಸೇವೆಯಾದ ಸ್ವದೇಶಿ ವಿನ್ಯಾಸ ಮತ್ತು ನಿರ್ಮಿಸಿದ ಸೆಮಿ-ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ಗಾಂಧಿನಗರದಿಂದ ಚಾಲನೆ ನೀಡಿದ್ದರು ಮತ್ತು ಮರುದಿನದಿಂದ ರೈಲು ತನ್ನ ವಾಣಿಜ್ಯ ಸಂಚಾರವನ್ನು ಪ್ರಾರಂಭಿಸಿತ್ತು.

ಇದನ್ನೂ ಓದಿ: ಚಕ್ರವರ್ತಿ ಸೂಲಿಬೆಲೆಯಿಂದ ಆಯುಧ ತರಬೇತಿ ಆರೋಪ: ಟ್ವಿಟರ್‌ನಲ್ಲಿ ಕನ್ನಡಿಗರ ಆಕ್ಷೇಪ

ಅಕ್ಟೋಬರ್ 6 ರಂದು ಗುಜರಾತ್‌ನ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ನಾಲ್ಕು ಎಮ್ಮೆಗಳು ಸಾವನ್ನಪ್ಪಿದ್ದವು. ಈ ವೇಳೆ ರೈಲಿಗೆ ಹಾನಿಯಾದ ಕಾರಣ ಅದರ ಮುಂಬಾಗದ ಕವರ್‌‌ ಅನ್ನು ರಾತ್ರೋರಾತ್ರಿ ಬದಲಾಯಿಸಬೇಕಾಯಿತು. ಮರುದಿನ (ಅಕ್ಟೋಬರ್ 7) ಸಂಭವಿಸಿದ ಎರಡನೇ ಘಟನೆಯಲ್ಲಿ, ಮುಂಬೈಗೆ ತೆರಳುತ್ತಿದ್ದಾಗ ಗುಜರಾತ್‌ನ ಆನಂದ್ ಬಳಿ ರೈಲು ಹಸುವಿಗೆ ಡಿಕ್ಕಿ ಹೊಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...