Homeಕರ್ನಾಟಕ3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

- Advertisement -
- Advertisement -

ದೇಶದ ರಾಜಧಾನಿ ದೆಹಲಿಯು ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2021ರ ವರದಿ ಬಹಿರಂಗಪಡಿಸಿದೆ. ರಾಜ್ಯದ ರಾಜಧಾನಿ ಬೆಂಗಳೂರು ಈ ಪಟ್ಟಿಯ ಮೂರನೇ ಸ್ಥಾನದಲ್ಲಿದೆ. ದೆಹಲಿಯಲ್ಲಿ ಕಳೆದ ವರ್ಷ ಪ್ರತಿದಿನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಲಾಗಿದೆ. ನಗರದಲ್ಲಿ ಒಟ್ಟು 390 ಪೊಕ್ಸೊ ಪ್ರಕರಣ ದಾಖಲಾಗಿದ್ದು 393 ಮಕ್ಕಳು ಸಂತ್ರಸ್ತರಾಗಿದ್ದಾರೆ. ಅದರಲ್ಲೂ 312 ಮಕ್ಕಳ ಮೇಲೆ ರೇಪ್ ನಡೆದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯಲ್ಲಿ 2021 ರಲ್ಲಿ ಮಹಿಳೆಯರ ವಿರುದ್ಧದ 13,892 ಅಪರಾಧ ಪ್ರಕರಣಗಳು ದಾಖಲಾಗಿವೆ. 2020 ಕ್ಕೆ ಹೋಲಿಸಿದರೆ 40% ಕ್ಕಿಂತ ಹೆಚ್ಚು ಹೆಚ್ಚಳವಾಗಿದೆ. 2020 ರಲ್ಲಿ 9,782 ಪ್ರಕರಣ ದಾಖಲಾಗಿತ್ತು ಎಂದು ಅಂಕಿಅಂಶಗಳು ತೋರಿಸಿವೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ, ದೆಹಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳ ಪ್ರಕರಣಗಳು ಎಲ್ಲಾ 19 ಮಹಾನಗರಗಳ ವಿಭಾಗದಲ್ಲಿ ಒಟ್ಟು ಅಪರಾಧಗಳ 32.20% ರಷ್ಟಿದೆ. ದೆಹಲಿಯ ನಂತರ ಆರ್ಥಿಕ ರಾಜಧಾನಿ ಮುಂಬೈ 5,543 ಪ್ರಕರಣಗಳು ದಾಖಲಾಗಿದ್ದು ಮತ್ತು ಬೆಂಗಳೂರು 3,127 ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂಓದಿ: ಬೆಂಗಳೂರು: ಇಬ್ಬರು ಸಹೋದರಿಯರನ್ನು ಬೆತ್ತಲುಗೊಳಿಸಿ ಹಲ್ಲೆ?

2020 ರಲ್ಲಿ ಮಹಿಳೆಯರ ವಿರುದ್ಧ ಬೆಂಗಳೂರಿನಲ್ಲಿ 2730 ಪ್ರಕರಣ ದಾಖಲಾದರೆ, 2021 ರಲ್ಲಿ 3127 ಪ್ರಕರಣಗಳು ದಾಖಲಾಗಿದೆ. 2021 ರಲ್ಲಿ 3 ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಗಳು ದಾಖಲಾಗಿದ್ದರೆ, 26 ಮಹಿಳೆಯರು ವರದಕ್ಷಿಣೆ ವಿಚಾರದಲ್ಲಿ ಹತ್ಯೆಯಾಗಿದ್ದಾರೆ. ಒಬ್ಬ ಮಹಿಳೆಯ ಮೇಲೆ ಆಸಿಡ್‌ ದಾಳಿ ನಡೆದಿದ್ದು, 431 ಮಹಿಳೆಯರು ಗಂಡ ಅಥವಾ ಅವನ ಸಂಬಂಧಿಗಳಿಂದ ಕ್ರೌರ್ಯ ಅನುಭವಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಒಟ್ಟು 590 ಮಹಿಳೆಯರ ಕಿಡ್ನಾಪ್‌ ಮಾಡಿರುವ ಘಟನೆ ನಡೆದಿದೆ. ಒಟ್ಟು 117 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2021 ರಲ್ಲಿ ನಗರದಲ್ಲಿ ಒಟ್ಟು 597 ಮಹಿಳೆಯ ಮೇಲೆ ದಾಳಿ ಮತ್ತು ಘನತೆಯನ್ನು ಕುಗ್ಗಿಸಿರುವ ಪ್ರಕರಣ ದಾಖಲಾಗಿದೆ. ಒಟ್ಟು 739 ವರದಕ್ಷಿಣೆ ನಿಷೇಧ ಕಾಯಿದೆ-1961 ರ ಪ್ರಕಾರ ಕಿರುಕುಳ ಅನುಭವಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ಎಸಗಲಾಗಿದೆ. ನಗರದಲ್ಲಿ ಒಟ್ಟು 390 ಪೊಕ್ಸೊ ಪ್ರಕರಣ ದಾಖಲಾಗಿದ್ದು 393 ಮಕ್ಕಳು ಸಂತ್ರಸ್ತರಾಗಿದ್ದಾರೆ. ಅದರಲ್ಲೂ 312 ಮಕ್ಕಳ ಮೇಲೆ ರೇಪ್ ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಖಾಸಗಿ ವಿವಿಗೆ ನೀಡಿರುವ ಭೂಮಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ದೇಶದ 19 ಮೆಟ್ರೋಪಾಲಿಟನ್‌ ನಗರಗಳಲ್ಲಿ ಮಹಿಳೆಯರ ವಿರುದ್ಧ ನಡೆದ ಅಪರಾಧಗಳಲ್ಲಿ ಮುಂಬೈ ಮತ್ತು ಬೆಂಗಳೂರು ಕ್ರಮವಾಗಿ 12.76% ಮತ್ತು 7.2% ಒಟ್ಟು ಪಾಲನ್ನು ಹೊಂದಿವೆ.

ಎರಡು ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಇತರ ಮೆಟ್ರೋಪಾಲಿಟನ್ ನಗರಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 3948 ಅಪಹರಣ ನಡೆದಿದ್ದು, 4674 ಗಂಡನಿಂದ ಕ್ರೌರ್ಯ ಮತ್ತು 833 ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಸಂಬಂಧಿಸಿದ ವಿಭಾಗಗಳಲ್ಲಿ ಮಹಿಳೆಯರ ವಿರುದ್ಧದ ಅತಿ ಹೆಚ್ಚು ಅಪರಾಧಗಳ ಪ್ರಕರಣಗಳನ್ನು ವರದಿಯಾಗಿದೆ.

2021 ರಲ್ಲಿ ದೆಹಲಿಯಲ್ಲಿ ಸರಾಸರಿಯಾಗಿ ಪ್ರತಿದಿನ ಎರಡು ಹುಡುಗಿಯರ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಅಂಕಿ ಅಂಶ ಹೇಳಿದೆ. ದೆಹಲಿಯಲ್ಲಿ ಮಹಿಳೆಯರ ವಿರುದ್ಧ 13,982 ಅಪರಾಧ ಪ್ರಕರಣಗಳನ್ನು ದಾಖಲಾದರೆ, ಎಲ್ಲಾ 19 ಮಹಾನಗರಗಳಲ್ಲಿ ಒಟ್ಟು ಅಪರಾಧಗಳು 43,414 ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಭಾರಿ ಮಳೆ: ಬೆಂಗಳೂರು ಸೇರಿದಂತೆ ಸುತ್ತಮುತ್ತ ಜನಜೀವನ ಅಸ್ತವ್ಯಸ್ತ

ಬೆಂಗಳೂರು ಮೆಟ್ರೋಪಾಲಿಟನ್ ನಗರಗಳಲ್ಲಿ ಮೂರನೇ ಸ್ಥಾನದಲ್ಲಿ ಇರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...