Homeಕರೋನಾ ತಲ್ಲಣ3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

- Advertisement -
- Advertisement -

ಕೊರೊನಾ ಎರಡನೆ ಅಲೆಯಿಂದ ಹೈರಾಣಾಗಿರುವ ದೇಶಕ್ಕೆ ಮೂರನೆ ಅಲೆಯ ಆತಂಕ ಎದುರಾಗಿದೆ. ಈ ಮಧ್ಯೆ ಸೆಪ್ಟೆಂಬರ್‌ 10 ರ ವೇಳೆಗೆ ಭಾರತದ ಕೊರೊನಾ ಪ್ರಕರಣಗಳು 32.8 ಕೋಟಿ ಮತ್ತು ಸಾವುಗಳು 4.40 ಲಕ್ಷ ಮುಟ್ಟುವ ನಿರೀಕ್ಷೆಯಿದೆ ಎಂದು ಜೀವನ್ ರಕ್ಷಾ ಸಮೀಕ್ಷೆ ವಿಶ್ಲೇಷಿಸಿದೆ. ಈ ವಿಶ್ಲೇಷಣೆಯಂತೆ ಈ ಸಮಯದಲ್ಲಿ ಕರ್ನಾಟಕದ ಕೊರೊನಾ ಪ್ರಕರಣಗಳು 29.50 ಲಕ್ಷ ಮತ್ತು ಸಾವುಗಳ ಸಂಖ್ಯೆ 37,470 ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

ಎರಡನೇ ಅಲೆಯ ನಂತರ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶದಗಳಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಕಳೆದ ನಾಲ್ಕು ವಾರಗಳಲ್ಲಿ ಇಲ್ಲಿ ಹೊಸ ಪ್ರಕರಣಗಳು 24% ಏರಿಕೆಯಾಗಿದೆ. ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿದ್ದು, ಇಲ್ಲಿ 18.4% ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿಯಾಗಿದೆ. ನಂತರದ ಸ್ಥಾನದಲ್ಲಿ, ಮೈಸೂರು, ಉಡುಪಿ ಮತ್ತು ಹಾಸನ ಜಿಲ್ಲೆಗಳಿವೆ.

ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

“ಕರ್ನಾಟಕವು ಅತ್ಯಂತ ಜಾಗರೂಕತೆ ವಹಿಸಬೇಕು. ಹೊರಗಿನಿಂದ ಬರುವವರಿಗೆ ಕಡಿವಾಣ ಹಾಕಬೇಕು. ಇಂದು ಕರ್ನಾಟಕವು 22,000 ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಮಾರ್ಚ್ ಮಧ್ಯದಲ್ಲಿ ಅಬ್ಬರಿಸಿದ 2 ನೇ ಅಲೆ ಸಮಯದಲ್ಲಿ, ಕೇವಲ ಐದರಿಂದ ಆರು ವಾರಗಳಲ್ಲಿ, ರಾಜ್ಯದಲ್ಲಿ 6 ಲಕ್ಷ ಸಕ್ರಿಯ ಪ್ರಕರಣಗಳು ವರದಿಯಾಗಿತ್ತು. ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಬೇಕು” ಎಂದು ಜೀವನ್ ರಕ್ಷಾದ ಸಂಚಾಲಕ ಮೈಸೂರು ಸಂಜೀವ್ ಹೇಳಿದ್ದಾರೆ.

ಜುಲೈ ತಿಂಗಳಲ್ಲಿ ಕರ್ನಾಟಕವು 61,314 ಹೊಸ ಕೊರೊನಾ ಪ್ರಕರಣಗಳು ಮತ್ತು 1,522 ಸಾವುಗಳನ್ನು ವರದಿ ಮಾಡಿದೆ. ಕರ್ನಾಟಕದಲ್ಲಿ ಕೊರೊನಾ ಚಿಕಿತ್ಸೆಗಾಗಿ 28,060 ಹೊಸ ವಿಮಾ ಕ್ಲೈಂಗಳನ್ನು ನೋಂದಾಯಿಸಲಾಗಿದೆ. ಅಂದರೆ ಸೋಂಕಿಗೊಳಗಾದವರಲ್ಲಿ 46% ಜನರು ಆರೋಗ್ಯ ವಿಮಾ ರಕ್ಷಣೆಯನ್ನು ಹೊಂದಿದ್ದಾರೆ.

ವಾಸ್ತವವಾಗಿ, “ಜುಲೈನಲ್ಲಿ ಕರ್ನಾಟಕದಲ್ಲಿ ನಿಜವಾದ ಪ್ರಕರಣಗಳ ಸಂಖ್ಯೆ ಸುಮಾರು 1.75 ಲಕ್ಷದಿಂದ 1.9 ಲಕ್ಷ ಮತ್ತು ಸುಮಾರು 3,000 ಸಾವುಗಳು ಸಂಭವಿಸಿವೆ” ಎಂದು ಸಂಜೀವ್ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗರ ಪಂಚಮಿ: ಸಾವು ಸಂಭವಿಸಬಹುದಾದ ಆಚರಣೆ- ಹಾವುಗಳ ಕುರಿತು ಇರುವ ಮಿಥ್ಯೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...