Homeಮುಖಪುಟದೆಹಲಿಯಲ್ಲಿ 4.0 ತೀವ್ರತೆಯ ಭೂಕಂಪನ; ಉತ್ತರ ಭಾರತದ ಹಲವೆಡೆ ಬಲವಾಗಿ ನಡುಗಿದ ಭೂಮಿ

ದೆಹಲಿಯಲ್ಲಿ 4.0 ತೀವ್ರತೆಯ ಭೂಕಂಪನ; ಉತ್ತರ ಭಾರತದ ಹಲವೆಡೆ ಬಲವಾಗಿ ನಡುಗಿದ ಭೂಮಿ

- Advertisement -
- Advertisement -

ರಾಷ್ಟ್ರ ರಾಜಧಾನಿಯಲ್ಲಿ 4.0 ತೀವ್ರತೆಯ ಭೂಕಂಪದ ನಂತರ ಇಂದು ಬೆಳಿಗ್ಗೆ 5:36 ಕ್ಕೆ ದೆಹಲಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವಾಯಿತು.

ದೇಶದಲ್ಲಿ ಭೂಕಂಪ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಭಾರತ ಸರ್ಕಾರದ ನೋಡಲ್ ಏಜೆನ್ಸಿಯಾದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು, ದೆಹಲಿಯನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ ಎಂದು ತನ್ನ ಇತ್ತೀಚಿನ ಹೆಳಿಕೆಯಲ್ಲಿ ತಿಳಿಸಿದೆ. ಭೂಕಂಪದ ಆಳ ಕೇವಲ 5 ಕಿ.ಮೀ. ಆಗಿತ್ತು.

ಧೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ ವಿಶೇಷ ಶಿಕ್ಷಣ ಕಾಲೇಜಿನ ಬಳಿ ಕೇಂದ್ರಬಿಂದು ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ತಿರದಲ್ಲಿ ಸರೋವರವನ್ನು ಹೊಂದಿರುವ ಆ ಪ್ರದೇಶವು ಪ್ರತಿ ಎರಡರಿಂದ ಮೂರು ವರ್ಷಗಳಿಗೊಮ್ಮೆ ಸಣ್ಣ, ಕಡಿಮೆ-ತೀವ್ರತೆಯ ಭೂಕಂಪಗಳನ್ನು ಅನುಭವಿಸುತ್ತಿದೆ. 2015 ರಲ್ಲಿ ಇದು 3.3 ತೀವ್ರತೆಯ ಭೂಕಂಪವನ್ನು ದಾಖಲಿಸಿದೆ ಎಂದು ಅವರು ಹೇಳಿದರು. ದೆಹಲಿಯಲ್ಲಿ ಭೂಕಂಪ ಸಂಭವಿಸಿದಾಗ ದೊಡ್ಡ ಶಬ್ದ ಕೇಳಿದೆ ಎಂದು ಅಧಿಕಾರಿ ಹೇಳಿದರು.

ದೆಹಲಿ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳು ‘ಶಾಂತವಾಗಿರಬೇಕು, ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

“ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕಂಪನಗಳು ಕಂಡುಬಂದಿವೆ. ಎಲ್ಲರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು, ಸಂಭವನೀಯ ನಂತರದ ಆಘಾತಗಳಿಗೆ ಜಾಗರೂಕರಾಗಿರಲು ಒತ್ತಾಯಿಸುತ್ತಿದ್ದೇವೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ದೆಹಲಿಯ ಹಂಗಾಮಿ ಮುಖ್ಯಮಂತ್ರಿ ಅತಿಶಿ, “ದೆಹಲಿಯಲ್ಲಿ ಬಲವಾದ ಭೂಕಂಪ ಸಂಭವಿಸಿದೆ, ಎಲ್ಲರೂ ಸುರಕ್ಷಿತವಾಗಿರಲಿ” ಎಂದು ಪ್ರಾರ್ಥಿಸಿದರು.

ಕಂಪನದಿಂದ ಇಲ್ಲಿಯವರೆಗೆ, ಯಾವುದೇ ಗಾಯಗಳು ಅಥವಾ ಸಾವುನೋವುಗಳ ವರದಿಗಳು ಬಂದಿಲ್ಲ. ನವದೆಹಲಿ ರೈಲ್ವೆ ನಿಲ್ದಾಣದ ಮಾರಾಟಗಾರರೊಬ್ಬರು ಮಾತನಾಡಿ, “ಎಲ್ಲವೂ ನಡುಗುತ್ತಿತ್ತು, ಗ್ರಾಹಕರು ಕಿರುಚಲು ಪ್ರಾರಂಭಿಸಿದರು” ಎಂದು ಅವರು ತಿಳಿಸಿದರು.

ನಿಲ್ದಾಣದಲ್ಲಿ ತಮ್ಮ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕನೊಬ್ಬ, “ಇಲ್ಲಿ ರೈಲು ಭೂಗತದಲ್ಲಿ ಓಡುತ್ತಿರುವಂತೆ” ಭಾಸವಾಗುತ್ತಿದೆ ಎಂದು ಹೇಳಿದರು.

ಗಾಜಿಯಾಬಾದ್ ನಿವಾಸಿಯೊಬ್ಬರು, “ಕಂಪನಗಳು ಇಷ್ಟು ಪ್ರಬಲವಾಗಿವೆ, ನಾನು ಇದಕ್ಕೂ ಮೊದಲು ಈ ರೀತಿ ಅನುಭವಿಸಿರಲಿಲ್ಲ” ಎಂದು ಹೇಳಿದರು. “ಇಡೀ ಕಟ್ಟಡ ನಡುಗುತ್ತಿತ್ತು” ಎಂದು ಅವರು ಹೇಳಿದರು.

ದೆಹಲಿಯಲ್ಲಿ ಭೂಕಂಪನದ ಅಪಾಯ ಹೆಚ್ಚಿರುವುದಕ್ಕೆ ಕಾರಣ

ದೆಹಲಿಯು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಭೂಕಂಪನ ವಲಯ ನಕ್ಷೆಯ ಹೆಚ್ಚಿನ ಭೂಕಂಪನ ವಲಯ (ವಲಯ IV) ದಲ್ಲಿ ಇರುವುದರಿಂದ ಅದು ಭೂಕಂಪಗಳಿಗೆ ಗುರಿಯಾಗುತ್ತದೆ.

ಜನವರಿ 23 ರಂದು, ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ 80 ಕಿಲೋಮೀಟರ್ ಆಳದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ-ಎನ್‌ಸಿಆರ್‌ನಾದ್ಯಂತ ಬಲವಾದ ಕಂಪನಗಳು ಕಂಡುಬಂದವು.

ಅದಕ್ಕೂ ಎರಡು ವಾರಗಳ ಮೊದಲು, ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಹತ್ತಿರದ ಪ್ರದೇಶಗಳಲ್ಲಿ ಕೊನೆಯ ಬಾರಿಗೆ ಸೌಮ್ಯ ಕಂಪನಗಳು ಕಂಡುಬಂದವು.

ಇದನ್ನೂ ಓದಿ; ಮಹಾರಾಷ್ಟ್ರ| ಗೋರಕ್ಷಕರ ಹೆಸರಿನಲ್ಲಿ ನನ್ನ ಮೇಲೆ ದಾಳಿಯಾಗಿದೆ ಎಂದು ಆರೋಪಿಸಿದ ವ್ಯಾಪಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...