Homeಮುಖಪುಟಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

- Advertisement -
- Advertisement -

ಭಾರತೀಯ ಜನತಾ ಪಕ್ಷವು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ 2019 -2020 ರ ಆರ್ಥಿಕ ವರ್ಷದಲ್ಲಿ 4.80 ಲಕ್ಷ ರೂ. ದೇಣಿಗೆ ಪಡೆದಿದ್ದಾಗಿ ಘೋಷಿಸಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಬುಧವಾರ ವರದಿಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

“ಈ ದೇಣಿಗೆಯ ಬಗ್ಗೆ ಪಕ್ಷವು ವಿಳಾಸ, ಬ್ಯಾಂಕ್ ಹೆಸರು, ಪ್ಯಾನ್ ಸೇರಿದಂತೆ ಇತರ ವಿವರಗಳನ್ನು ಬಿಜೆಪಿ ಒದಗಿಸಿಲ್ಲ” ಎಂದು ADR ಹೇಳಿದೆ.

ಇದನ್ನೂ ಓದಿ: ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

“ಅವರ ವೆಬ್‌ಸೈಟ್‌ನಲ್ಲಿ ದಾನಿಯು ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಎಂದು ಹೇಳಿದೆ. ಈ ಸಂಸ್ಥೆ ಅಮರಾವತಿ ಮುನ್ಸಿಪಲ್ ಕಾರ್ಪೊರೇಶನ್ ಆಗಿದ್ದು, ಅಲ್ಲಿಯ ಮೇಯರ್ ಮತ್ತು ಉಪ ಮೇಯರ್ ಬಿಜೆಪಿಯವರಾಗಿದ್ದಾರೆ. ಸರ್ಕಾರಿ ಸಂಸ್ಥೆಯೊಂದು ರಾಜಕೀಯ ಪಕ್ಷವೊಂದಕ್ಕೆ ಕೊಡುಗೆ ನೀಡುವುದು ಕಾನೂನಾತ್ಮಕವಾಗಿ ಸರಿಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ADR ತಿಳಿಸಿದೆ.

ಬಿಜೆಪಿ ತನ್ನ ಘೋಷಣೆಯಲ್ಲಿ ಕನಿಷ್ಠ ಮೂರು ದಾನಿಗಳಿಂದ 1.516 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆಯಲಾಗಿದೆ ಎಂದು ಹೇಳಿದೆ. “ಈ ಮೂರು ದೇಣಿಗೆಗಳು ಬಿಹಾರದ ಝಂಜಾರಪುರದಿಂದ ನೀಡಲಾಗಿದ್ದು, ಒಂದೊಂದು ಭೂಮಿಯು ರೂ. 36.80 ಲಕ್ಷ, ರೂ. 50 ಲಕ್ಷ ಮತ್ತು ರೂ. 64.88 ಲಕ್ಷ ಮೌಲ್ಯದ್ದಾಗಿದೆ” ಎಂದು ADR ವರದಿ ಹೇಳಿದೆ.

ಆದರೆ ಬಿಜೆಪಿ ತನಗೆ ದೇಣಿಗೆ ಅಥವಾ ಭೂಮಿ ನೀಡಿದ ದಾನಿಗಳ ವಿಳಾಸ, ಪ್ಯಾನ್ ಕಾರ್ಡ್ ಮಾಹಿತಿಯನ್ನು ಒದಗಿಸಿಲ್ಲ. ಮಾತ್ರವಲ್ಲದೆ, ತಾವು ಪಡೆದ ಭೂಮಿಯು ಕೃಷಿಭೂಮಿಯೇ ಅಥವಾ ವಾಣಿಜ್ಯ ಭೂಮಿಯೇ ಎಂಬುದನ್ನೂ ಕೂಡ ಬಹಿರಂಗಪಡಿಸಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅಗತ್ಯಬಿದ್ದರೆ ಶಿವಸೇನಾ ಭವನ ಕೆಡವುತ್ತೇವೆ: ಕೋಲಾಹಲವೆಬ್ಬಿಸಿದ ಬಿಜೆಪಿ ಶಾಸಕನ ಹೇಳಿಕೆ

ಮಹಾರಾಷ್ಟ್ರದ ಪ್ರವಾಹ ಪರಿಹಾರಕ್ಕಾಗಿ ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ಹಣ ಪಡೆಯಲಾಗಿದೆ. ಈ ಹಣವು ಅಲ್ಲಿನ ಕಾರ್ಪೊರೇಟರ್‌ಗಳು ಸ್ವಯಂಪ್ರೇರಿತರಾಗಿ ತಮ್ಮ ಸಂಬಳದಿಂದ ನೀಡಿರುವ ಕೊಡುಗೆಯಾಗಿದೆ ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಕಾರ್ಪೊರೇಟರ್‌ಗಳು ಮುನ್ಸಿಪಲ್‌‌ ಕಾರ್ಪೊರೇಶನ್‌ಗೆ ತಮ್ಮ ಸಂಬಳದ ಒಂದು ಭಾಗವನ್ನು ಕಡಿತಗೊಳಿಸಿ, ಅದನ್ನು ಒಟ್ಟಾಗಿ ಅವರ ಪರವಾಗಿ ಬಿಜೆಪಿಗೆ ವರ್ಗಾಯಿಸಲು ವಿನಂತಿಸಿದ್ದರು” ಎಂದು ಅವರು ಹೇಳಿದ್ದಾರೆ.

“ಈ ಮೊತ್ತವು 4,80,000 ರೂ. ಆಗಿದ್ದು, ಕಾರ್ಪೋರೇಟರ್‌ಗಳಿಂದ ರೂ. 20,000 ಕ್ಕಿಂತ ಕಡಿಮೆ ಸಂಗ್ರಹಿಸಲಾಗಿದೆ. ಅದನ್ನು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ನೇರವಾಗಿ ಪಕ್ಷಕ್ಕೆ ವರ್ಗಾವಣೆ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...