Homeಮುಖಪುಟಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

- Advertisement -
- Advertisement -

ಭಾರತೀಯ ಜನತಾ ಪಕ್ಷವು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ 2019 -2020 ರ ಆರ್ಥಿಕ ವರ್ಷದಲ್ಲಿ 4.80 ಲಕ್ಷ ರೂ. ದೇಣಿಗೆ ಪಡೆದಿದ್ದಾಗಿ ಘೋಷಿಸಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಬುಧವಾರ ವರದಿಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

“ಈ ದೇಣಿಗೆಯ ಬಗ್ಗೆ ಪಕ್ಷವು ವಿಳಾಸ, ಬ್ಯಾಂಕ್ ಹೆಸರು, ಪ್ಯಾನ್ ಸೇರಿದಂತೆ ಇತರ ವಿವರಗಳನ್ನು ಬಿಜೆಪಿ ಒದಗಿಸಿಲ್ಲ” ಎಂದು ADR ಹೇಳಿದೆ.

ಇದನ್ನೂ ಓದಿ: ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

“ಅವರ ವೆಬ್‌ಸೈಟ್‌ನಲ್ಲಿ ದಾನಿಯು ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಎಂದು ಹೇಳಿದೆ. ಈ ಸಂಸ್ಥೆ ಅಮರಾವತಿ ಮುನ್ಸಿಪಲ್ ಕಾರ್ಪೊರೇಶನ್ ಆಗಿದ್ದು, ಅಲ್ಲಿಯ ಮೇಯರ್ ಮತ್ತು ಉಪ ಮೇಯರ್ ಬಿಜೆಪಿಯವರಾಗಿದ್ದಾರೆ. ಸರ್ಕಾರಿ ಸಂಸ್ಥೆಯೊಂದು ರಾಜಕೀಯ ಪಕ್ಷವೊಂದಕ್ಕೆ ಕೊಡುಗೆ ನೀಡುವುದು ಕಾನೂನಾತ್ಮಕವಾಗಿ ಸರಿಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ADR ತಿಳಿಸಿದೆ.

ಬಿಜೆಪಿ ತನ್ನ ಘೋಷಣೆಯಲ್ಲಿ ಕನಿಷ್ಠ ಮೂರು ದಾನಿಗಳಿಂದ 1.516 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆಯಲಾಗಿದೆ ಎಂದು ಹೇಳಿದೆ. “ಈ ಮೂರು ದೇಣಿಗೆಗಳು ಬಿಹಾರದ ಝಂಜಾರಪುರದಿಂದ ನೀಡಲಾಗಿದ್ದು, ಒಂದೊಂದು ಭೂಮಿಯು ರೂ. 36.80 ಲಕ್ಷ, ರೂ. 50 ಲಕ್ಷ ಮತ್ತು ರೂ. 64.88 ಲಕ್ಷ ಮೌಲ್ಯದ್ದಾಗಿದೆ” ಎಂದು ADR ವರದಿ ಹೇಳಿದೆ.

ಆದರೆ ಬಿಜೆಪಿ ತನಗೆ ದೇಣಿಗೆ ಅಥವಾ ಭೂಮಿ ನೀಡಿದ ದಾನಿಗಳ ವಿಳಾಸ, ಪ್ಯಾನ್ ಕಾರ್ಡ್ ಮಾಹಿತಿಯನ್ನು ಒದಗಿಸಿಲ್ಲ. ಮಾತ್ರವಲ್ಲದೆ, ತಾವು ಪಡೆದ ಭೂಮಿಯು ಕೃಷಿಭೂಮಿಯೇ ಅಥವಾ ವಾಣಿಜ್ಯ ಭೂಮಿಯೇ ಎಂಬುದನ್ನೂ ಕೂಡ ಬಹಿರಂಗಪಡಿಸಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅಗತ್ಯಬಿದ್ದರೆ ಶಿವಸೇನಾ ಭವನ ಕೆಡವುತ್ತೇವೆ: ಕೋಲಾಹಲವೆಬ್ಬಿಸಿದ ಬಿಜೆಪಿ ಶಾಸಕನ ಹೇಳಿಕೆ

ಮಹಾರಾಷ್ಟ್ರದ ಪ್ರವಾಹ ಪರಿಹಾರಕ್ಕಾಗಿ ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ಹಣ ಪಡೆಯಲಾಗಿದೆ. ಈ ಹಣವು ಅಲ್ಲಿನ ಕಾರ್ಪೊರೇಟರ್‌ಗಳು ಸ್ವಯಂಪ್ರೇರಿತರಾಗಿ ತಮ್ಮ ಸಂಬಳದಿಂದ ನೀಡಿರುವ ಕೊಡುಗೆಯಾಗಿದೆ ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಕಾರ್ಪೊರೇಟರ್‌ಗಳು ಮುನ್ಸಿಪಲ್‌‌ ಕಾರ್ಪೊರೇಶನ್‌ಗೆ ತಮ್ಮ ಸಂಬಳದ ಒಂದು ಭಾಗವನ್ನು ಕಡಿತಗೊಳಿಸಿ, ಅದನ್ನು ಒಟ್ಟಾಗಿ ಅವರ ಪರವಾಗಿ ಬಿಜೆಪಿಗೆ ವರ್ಗಾಯಿಸಲು ವಿನಂತಿಸಿದ್ದರು” ಎಂದು ಅವರು ಹೇಳಿದ್ದಾರೆ.

“ಈ ಮೊತ್ತವು 4,80,000 ರೂ. ಆಗಿದ್ದು, ಕಾರ್ಪೋರೇಟರ್‌ಗಳಿಂದ ರೂ. 20,000 ಕ್ಕಿಂತ ಕಡಿಮೆ ಸಂಗ್ರಹಿಸಲಾಗಿದೆ. ಅದನ್ನು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ನೇರವಾಗಿ ಪಕ್ಷಕ್ಕೆ ವರ್ಗಾವಣೆ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...