Homeಮುಖಪುಟಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

- Advertisement -
- Advertisement -

ಭಾರತೀಯ ಜನತಾ ಪಕ್ಷವು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ 2019 -2020 ರ ಆರ್ಥಿಕ ವರ್ಷದಲ್ಲಿ 4.80 ಲಕ್ಷ ರೂ. ದೇಣಿಗೆ ಪಡೆದಿದ್ದಾಗಿ ಘೋಷಿಸಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಬುಧವಾರ ವರದಿಯಲ್ಲಿ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

“ಈ ದೇಣಿಗೆಯ ಬಗ್ಗೆ ಪಕ್ಷವು ವಿಳಾಸ, ಬ್ಯಾಂಕ್ ಹೆಸರು, ಪ್ಯಾನ್ ಸೇರಿದಂತೆ ಇತರ ವಿವರಗಳನ್ನು ಬಿಜೆಪಿ ಒದಗಿಸಿಲ್ಲ” ಎಂದು ADR ಹೇಳಿದೆ.

ಇದನ್ನೂ ಓದಿ: ‘ನನಗೆ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನವಿದು’ – ಹಿರಿಯೂರು ಬಿಜೆಪಿ ಶಾಸಕಿ

“ಅವರ ವೆಬ್‌ಸೈಟ್‌ನಲ್ಲಿ ದಾನಿಯು ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಎಂದು ಹೇಳಿದೆ. ಈ ಸಂಸ್ಥೆ ಅಮರಾವತಿ ಮುನ್ಸಿಪಲ್ ಕಾರ್ಪೊರೇಶನ್ ಆಗಿದ್ದು, ಅಲ್ಲಿಯ ಮೇಯರ್ ಮತ್ತು ಉಪ ಮೇಯರ್ ಬಿಜೆಪಿಯವರಾಗಿದ್ದಾರೆ. ಸರ್ಕಾರಿ ಸಂಸ್ಥೆಯೊಂದು ರಾಜಕೀಯ ಪಕ್ಷವೊಂದಕ್ಕೆ ಕೊಡುಗೆ ನೀಡುವುದು ಕಾನೂನಾತ್ಮಕವಾಗಿ ಸರಿಯೇ ಎಂಬ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ADR ತಿಳಿಸಿದೆ.

ಬಿಜೆಪಿ ತನ್ನ ಘೋಷಣೆಯಲ್ಲಿ ಕನಿಷ್ಠ ಮೂರು ದಾನಿಗಳಿಂದ 1.516 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಪಡೆಯಲಾಗಿದೆ ಎಂದು ಹೇಳಿದೆ. “ಈ ಮೂರು ದೇಣಿಗೆಗಳು ಬಿಹಾರದ ಝಂಜಾರಪುರದಿಂದ ನೀಡಲಾಗಿದ್ದು, ಒಂದೊಂದು ಭೂಮಿಯು ರೂ. 36.80 ಲಕ್ಷ, ರೂ. 50 ಲಕ್ಷ ಮತ್ತು ರೂ. 64.88 ಲಕ್ಷ ಮೌಲ್ಯದ್ದಾಗಿದೆ” ಎಂದು ADR ವರದಿ ಹೇಳಿದೆ.

ಆದರೆ ಬಿಜೆಪಿ ತನಗೆ ದೇಣಿಗೆ ಅಥವಾ ಭೂಮಿ ನೀಡಿದ ದಾನಿಗಳ ವಿಳಾಸ, ಪ್ಯಾನ್ ಕಾರ್ಡ್ ಮಾಹಿತಿಯನ್ನು ಒದಗಿಸಿಲ್ಲ. ಮಾತ್ರವಲ್ಲದೆ, ತಾವು ಪಡೆದ ಭೂಮಿಯು ಕೃಷಿಭೂಮಿಯೇ ಅಥವಾ ವಾಣಿಜ್ಯ ಭೂಮಿಯೇ ಎಂಬುದನ್ನೂ ಕೂಡ ಬಹಿರಂಗಪಡಿಸಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಅಗತ್ಯಬಿದ್ದರೆ ಶಿವಸೇನಾ ಭವನ ಕೆಡವುತ್ತೇವೆ: ಕೋಲಾಹಲವೆಬ್ಬಿಸಿದ ಬಿಜೆಪಿ ಶಾಸಕನ ಹೇಳಿಕೆ

ಮಹಾರಾಷ್ಟ್ರದ ಪ್ರವಾಹ ಪರಿಹಾರಕ್ಕಾಗಿ ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ಹಣ ಪಡೆಯಲಾಗಿದೆ. ಈ ಹಣವು ಅಲ್ಲಿನ ಕಾರ್ಪೊರೇಟರ್‌ಗಳು ಸ್ವಯಂಪ್ರೇರಿತರಾಗಿ ತಮ್ಮ ಸಂಬಳದಿಂದ ನೀಡಿರುವ ಕೊಡುಗೆಯಾಗಿದೆ ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಕಾರ್ಪೊರೇಟರ್‌ಗಳು ಮುನ್ಸಿಪಲ್‌‌ ಕಾರ್ಪೊರೇಶನ್‌ಗೆ ತಮ್ಮ ಸಂಬಳದ ಒಂದು ಭಾಗವನ್ನು ಕಡಿತಗೊಳಿಸಿ, ಅದನ್ನು ಒಟ್ಟಾಗಿ ಅವರ ಪರವಾಗಿ ಬಿಜೆಪಿಗೆ ವರ್ಗಾಯಿಸಲು ವಿನಂತಿಸಿದ್ದರು” ಎಂದು ಅವರು ಹೇಳಿದ್ದಾರೆ.

“ಈ ಮೊತ್ತವು 4,80,000 ರೂ. ಆಗಿದ್ದು, ಕಾರ್ಪೋರೇಟರ್‌ಗಳಿಂದ ರೂ. 20,000 ಕ್ಕಿಂತ ಕಡಿಮೆ ಸಂಗ್ರಹಿಸಲಾಗಿದೆ. ಅದನ್ನು ಅಮರಾವತಿ ಮುನ್ಸಿಪಲ್‌‌ ಕಾರ್ಪೊರೇಶನ್‌ನಿಂದ ನೇರವಾಗಿ ಪಕ್ಷಕ್ಕೆ ವರ್ಗಾವಣೆ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಜನರಿಗೆ ಹೆಚ್ಚು ‘ಬೀಫ್’ ತಿನ್ನುವಂತೆ ಹೇಳಿದ ಮೇಘಾಲಯದ ಬಿಜೆಪಿ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...