Homeಮುಖಪುಟಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

- Advertisement -
- Advertisement -

ಮಣಿಪುರದಲ್ಲಿ ಮೈತಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳನ್ನು ಜುಲೈ ತಿಂಗಳಲ್ಲಿ ಬರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ರವಿವಾರ ಬಂಧಿಸಿದ್ದಾರೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಬಂಧಿತ ಆರೋಪಿಗಳೆಂದು ಸಿಬಿಐ ತಿಳಿಸಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರು ವಿದ್ಯಾರ್ಥಿನಿಯರನ್ನು ಇಂಫಾಲದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆಯೆಂದು ತಿಳಿದುಬಂದಿದೆ.

ಇಂದು ಬಂಧಿತರಾದ ನಾಲ್ವರು ಆರೋಪಿಗಳನ್ನು ಪಾವೊ ಮಿನಿಲುಮ್ ಹಾವೊಕಿಪ್, ಮಾಲ್ಸಾವುನ್ ಹಾವೊಕಿಪ್, ಲ್ಹಿಂಗ್ನೆಚೊಂಗ್ ಬೈಟೆ ಹಾಗೂ ಟಿನ್ನೈಖೋಲ್ ಎಂದು ಗುರುತಿಸಲಾಗಿದ್ದು, ಅವರನ್ನು ಅಸ್ಸಾಂನ ಗುವಾಹಟಿಗೆ ಕೊಂಡೊಯ್ಯಲಾಗಿದೆ. ಬಂಧಿತ ಆರೋಪಿ ಲ್ಹಿಂಗ್ನೆಚೊಂಗ್ ಬೈಟೆ, ಕೊಲೆಯಾದ ವಿದ್ಯಾರ್ಥಿನಿಯ ಗೆಳತಿಯೆಂದು ತಿಳಿದುಬಂದಿದೆ.

ಜುಲೈನಲ್ಲಿ ನಾಪತ್ತೆಯಾದ ಓರ್ವ ವಿದ್ಯಾರ್ಥಿನಿ ಹಾಗೂ ಇನ್ನೋರ್ವ ವಿದ್ಯಾರ್ಥಿಯ ಮೃತದೇಹಗಳ ಭಾವಚಿತ್ರ ಸೆ.26ರಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಬಳಿಕ ಮಣಿಪುರ ಸರಕಾರ ತಕ್ಷಣವೇ ಕಾರ್ಯಪ್ರವೃತ್ತವಾಗಿ ಹಂತಕರ ಪತ್ತೆ ಕಾರ್ಯಾಚರಣೆ ಆರಂಭಿಸಿತ್ತು.

ಪೊಲೀಸರು ಹಾಗೂ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ನಾಲ್ವರು ಶಂಕಿತ ಆರೋಪಿಗಳನ್ನು ಚುರಾಚಂದ್ಪುರ ಗುಡ್ಡಗಾಡು ಜಿಲ್ಲೆಯಿಂದ ಬಂಧಿಸಲಾಗಿತ್ತು. ಮೇ 3ರಂದು ಭೀಕರ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದ ಈ ಜಿಲ್ಲೆಯಲ್ಲಿ ಹಲವಾರು ಕುಕಿ ಉಗ್ರಗಾಮಿ ಸಂಘಟನೆಗಳು ಕಾರ್ಯಾಚರಿಸುತ್ತಿವೆ.

ಆರೋಪಿಗಳನ್ನು ಬಂಧಿಸಿದ ತಕ್ಷಣವೇ ಅವರನ್ನು ವಿಮಾನನಿಲ್ದಾಣಕ್ಕೆ ಕೊಂಡೊಯ್ಯಲಾಗಿತ್ತು. ಅಲ್ಲಿಯೇ ಕಾಯುತ್ತಿದ್ದ ಸಿಬಿಐ ತಂಡವು ಅವರನ್ನು 5.45ರ ವಿಮಾನದಲ್ಲಿ ಗೌಹಾಟಿಗೆ ಕೊಂಡೊಯ್ಯಿತು. ಆರೋಪಿಗಳನ್ನು ಬಂಧಿಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಕೆಲವು ಜನರು ವಿಮಾನನಿಲ್ದಾಣದೆಡೆಗೆ ಧಾವಿಸಲು ಯತ್ನಿಸಿದರೆಂದು ಮೂಲಗಳು ತಿಳಿಸಿವೆ.

ಈ ಕುರಿತು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಮಾತನಾಡಿ, ”ಸಿಬಿಐ, ಸೇನೆ, ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಭದ್ರತಾ ಪಡೆಗಳ ಜಂಟಿ ತಂಡವು ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಚುರಚಂದ್‌ಪುರ ಜಿಲ್ಲೆಯ ನಾಲ್ವರು ಶಂಕಿತರನ್ನು ಬಂಧಿಸಿದೆ” ಎಂದು ತಿಳಿಸಿದ್ದಾರೆ.

”ಇಬ್ಬರು ವಿದ್ಯಾರ್ಥಿನಿಯರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲಾಗುವುದು” ಎಂದು ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಹೇಳಿದರು.

ಮಣಿಪುರದಲ್ಲಿ, ಕಳೆದ ವಾರ 17 ವರ್ಷದ ವಿದ್ಯಾರ್ಥಿ ಹಿಜಾಮ್ ಲಿಂತೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೇಮ್‌ಜೀತ್ ಹತ್ಯೆಯ ವಿರುದ್ಧ ವಿದ್ಯಾರ್ಥಿಗಳು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದರು.

ಸಂತ್ರಸ್ತರ ಕುಟುಂಬಗಳು ತಮ್ಮ ಮಕ್ಕಳನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಂದಿದ್ದಾರೆ ಎಂದು ಶಂಕಿಸಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಂತರ ಮುಖ್ಯಮಂತ್ರಿ ನಿವಾಸದ ಬಳಿ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದ ಕನಿಷ್ಠ 100 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ, ಪೊಲೀಸರು ಮತ್ತು ಸೇನೆಯು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಗುಡ್ಡಗಾಡು ಜಿಲ್ಲೆಯ ಚುರಾಚಂದ್‌ಪುರದಿಂದ ಬಂಧಿಸಿದೆ. ಅಲ್ಲಿ ಮೇ 3 ರಂದು ಜಾತಿ ಹಿಂಸಾಚಾರ ಪ್ರಾರಂಭವಾಗಿತ್ತು.

ಸಿಸಿಟಿವಿ ದೃಶ್ಯದಲ್ಲೇನಿತ್ತು? ವಿದ್ಯಾರ್ಥಿಗಳು ಕಾಣೆಯಾದ ಬಳಿಕ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಪೊಲೀಸರು ಸಿಸಿಟಿವಿಯನ್ನು ಪರೀಕ್ಷಿಸಿದಾಗ ಇಬ್ಬರು ಕಿಡ್ನ್ಯಾಪ್ ಆಗಿರುವುದು ಗೊತ್ತಾಗಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಮೃತದೇಹದ ಚಿತ್ರಗಳು ವೈರಲ್ ಆಗಿದ್ದವು. ಆದರೂ ಅವರ ಮೃತದೇಹ ಪತ್ತೆಯಾಗಿರಲಿಲ್ಲ.

ಇದನ್ನೂ ಓದಿ: ಹಿಂಸಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಜೆಪಿ ನಡ್ಡಾಗೆ ಮಣಿಪುರ ಬಿಜೆಪಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. In Manipur the law and order problem is still continuing it seems. We can’t understand why it is continuing for such a long time. What’s the roll of the state government and the central govt. to curb this violence. Are they r not serious in their roll. Manipur is not a big state when compare with other states of India, may be geographic condition is bit tough. But our army is capable of handling it. But why this delay? We can’t understand. Too much politi localisation of problem may be one of the reason it seems. Any way let us hope and pray for immediate Peace restoration in this tiny state. This is our sincere prayer on this special day of Gandhi Jayanthi.

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...