Homeಕರೋನಾ ತಲ್ಲಣಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

ಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

- Advertisement -
- Advertisement -

ಮುಂಬೈನಲ್ಲಿ ಹೌಸಿಂಗ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ‘ನಕಲಿ ವ್ಯಾಕ್ಸಿನೇಷನ್ ಕ್ಯಾಂಪ್’ ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಗಳ ಹೇಳಿಕೆಗಳನ್ನು ದಾಖಲಿಸಿ, ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಚಲನಚಿತ್ರ ನಿರ್ಮಾಪಕ ರಮೇಶ್ ತೌರಾನಿ ಕೂಡ ಹಗರಣದಲ್ಲಿ ಮೋಸವಾಗಿದೆ. ನಾನು ನಕಲಿ ಲಸಿಕೆ ಕ್ಯಾಂಪ್‌ನ ಸಂತ್ರಸ್ತ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ, ತಮ್ಮ ಉದ್ಯೋಗಿಗಳಿಗಾಗಿ ರಮೇಶ್ ಆಯೋಜಿಸಿದ್ದ ವ್ಯಾಕ್ಸಿನೇಷನ್ ಕ್ಯಾಂಪ್ ಇದೇ ರೀತಿಯ ದಂಧೆಗೆ ಬಲಿಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ಟಿಪ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥರಾಗಿರುವ ರಮೇಶ್ ತೌರಾನಿ, ಮೇ 30 ಮತ್ತು ಜೂನ್ 3 ರಂದು ತಮ್ಮ ಸಂಸ್ಥೆಯ 365 ಉದ್ಯೋಗಿಗಳಿಗೆ ಲಸಿಕಾ ಶಿಬಿರವನ್ನು ಏರ್ಪಡಿಸಿದ್ದರು. ಆದರೆ ಇಲ್ಲಿಯವರೆಗೂ ಇನ್ನೂ ಲಸಿಕೆ ಪ್ರಮಾಣಪತ್ರವನ್ನು ಪಡೆದಿಲ್ಲ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ನಾವು ಇನ್ನೂ ಪ್ರಮಾಣಪತ್ರಗಳಿಗಾಗಿ ಕಾಯುತ್ತಿದ್ದೇವೆ. ಪ್ರಮಾಣಪತ್ರಗಳಿಗಾಗಿನನ್ನ ಕಚೇರಿಯಿಂದ ಎಸ್‌ಪಿ ಈವೆಂಟ್‌ನ ಸಂಜಯ್ ಗುಪ್ತಾ ಅವರನ್ನು ಸಂಪರ್ಕಿಸಿದಾಗ, ಶನಿವಾರ (ಜೂನ್ 12) ರ ವೇಳೆಗೆ ಪ್ರಮಾಣಪತ್ರಗಳು ಸಿಗಲಿವೆ ಎಂದು ಹೇಳಿದ್ದರು. ಆದರೆ, ಇನ್ನೂ ನಮಗೆ ಪ್ರಮಾಣ ಪತ್ರ ದೊರೆತಿಲ್ಲ. ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಯಿಂದ ಲಸಿಕೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ನಮಗೆ ತಿಳಿಸಿದ್ದರು” ಎಂದು ನಿರ್ಮಾಪಕ ರಮೇಶ್ ತೌರಾನಿ ಹೇಳಿದ್ದಾರೆ.

’ನಮ್ಮ ಸಂಸ್ಥೆಯ 356 ಜನರಿಗೆ ಲಸಿಕೆ ನೀಡಲಾಗಿದೆ. ಪ್ರತಿ ಡೋಸ್‌ಗೆ 1,200 ರೂಪಾಯಿ ಪಾವತಿಸಿದ್ದೇವೆ. ಇದರ ಜೊತೆಗೆ ಹೆಚ್ಚುವರಿ ಜಿಎಸ್‌ಟಿ ಹಣವನ್ನು ನೀಡಲಾಗಿದೆ. ಆದರೆ, ಈಗ ಚಿಂತೆಗೆ ಈಡು ಮಾಡಿರುವುದು ಹಣವಲ್ಲ. ಲಸಿಕೆ ಎಂದು ನಮಗೆ ಏನು ನೀಡಿದ್ದಾರೆ ಎಂಬ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಇದು ನಿಜವಾದ ಕೋವಿಶೀಲ್ಡ್ ಅಥವಾ ಯಾವುದೋ ಲವಣಯುಕ್ತ ನೀರೇ? ಎಂಬ ಬಗ್ಗೆ ಅನುಮಾನ ಬಂದಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆಯನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಮೂಲಕ ವ್ಯಾಕ್ಸಿನೇಷನ್ ಶಿಬಿರವನ್ನು ಆಯೋಜಿಸಿದ ಕೆಲವು ವ್ಯಕ್ತಿಗಳು ಮೋಸ ಮಾಡಿದ್ದಾರೆ. ನಕಲಿ ಲಸಿಕೆ ನೀಡಿದ್ದಾರೆ ಎಂದು ಕಂಡಿವಲ್ಲಿ ಉಪನಗರದಲ್ಲಿನ ವಸತಿ ಸಂಘವು ಪೊಲೀಸರಿಗೆ ದೂರು ನೀಡಿತ್ತು. ಕೋವಿನ್ ಪೋರ್ಟಲ್‌ನಲ್ಲಿ ಇವರ ಯಾವುದೇ ದಾಖಲುಗಳು ಇಲ್ಲ ಎಂದು ದೂರು ನೀಡಿದ್ದಾರೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...