Homeಕರೋನಾ ತಲ್ಲಣಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

ಮುಂಬೈ: ನಕಲಿ ಲಸಿಕೆ ಕ್ಯಾಂಪ್ ಹಗರಣದಲ್ಲಿ ನಾಲ್ವರ ಬಂಧನ

- Advertisement -
- Advertisement -

ಮುಂಬೈನಲ್ಲಿ ಹೌಸಿಂಗ್ ಸೊಸೈಟಿಯಲ್ಲಿ ಆಯೋಜಿಸಲಾಗಿದ್ದ ‘ನಕಲಿ ವ್ಯಾಕ್ಸಿನೇಷನ್ ಕ್ಯಾಂಪ್’ ಪ್ರಕರಣದಲ್ಲಿ ನಾಲ್ಕು ಜನರನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಗಳ ಹೇಳಿಕೆಗಳನ್ನು ದಾಖಲಿಸಿ, ಪ್ರಕರಣ ದಾಖಲಿಸಿದ್ದ ಮುಂಬೈ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಚಲನಚಿತ್ರ ನಿರ್ಮಾಪಕ ರಮೇಶ್ ತೌರಾನಿ ಕೂಡ ಹಗರಣದಲ್ಲಿ ಮೋಸವಾಗಿದೆ. ನಾನು ನಕಲಿ ಲಸಿಕೆ ಕ್ಯಾಂಪ್‌ನ ಸಂತ್ರಸ್ತ ಎಂದು ಹೇಳಿಕೊಂಡಿದ್ದಾರೆ. ಏಕೆಂದರೆ, ತಮ್ಮ ಉದ್ಯೋಗಿಗಳಿಗಾಗಿ ರಮೇಶ್ ಆಯೋಜಿಸಿದ್ದ ವ್ಯಾಕ್ಸಿನೇಷನ್ ಕ್ಯಾಂಪ್ ಇದೇ ರೀತಿಯ ದಂಧೆಗೆ ಬಲಿಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ.

ಟಿಪ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥರಾಗಿರುವ ರಮೇಶ್ ತೌರಾನಿ, ಮೇ 30 ಮತ್ತು ಜೂನ್ 3 ರಂದು ತಮ್ಮ ಸಂಸ್ಥೆಯ 365 ಉದ್ಯೋಗಿಗಳಿಗೆ ಲಸಿಕಾ ಶಿಬಿರವನ್ನು ಏರ್ಪಡಿಸಿದ್ದರು. ಆದರೆ ಇಲ್ಲಿಯವರೆಗೂ ಇನ್ನೂ ಲಸಿಕೆ ಪ್ರಮಾಣಪತ್ರವನ್ನು ಪಡೆದಿಲ್ಲ.

ಇದನ್ನೂ ಓದಿ: ತಬ್ಲೀಘಿ ಜಮಾತ್‌ ಗುರಿಯಾಗಿಸಿ ಕಾರ್ಯಕ್ರಮ: ಸುವರ್ಣ ನ್ಯೂಸ್‌ ಮತ್ತು ನ್ಯೂಸ್‌‌ 18 ಕನ್ನಡಕ್ಕೆ 1.5 ಲಕ್ಷ ದಂಡ

“ನಾವು ಇನ್ನೂ ಪ್ರಮಾಣಪತ್ರಗಳಿಗಾಗಿ ಕಾಯುತ್ತಿದ್ದೇವೆ. ಪ್ರಮಾಣಪತ್ರಗಳಿಗಾಗಿನನ್ನ ಕಚೇರಿಯಿಂದ ಎಸ್‌ಪಿ ಈವೆಂಟ್‌ನ ಸಂಜಯ್ ಗುಪ್ತಾ ಅವರನ್ನು ಸಂಪರ್ಕಿಸಿದಾಗ, ಶನಿವಾರ (ಜೂನ್ 12) ರ ವೇಳೆಗೆ ಪ್ರಮಾಣಪತ್ರಗಳು ಸಿಗಲಿವೆ ಎಂದು ಹೇಳಿದ್ದರು. ಆದರೆ, ಇನ್ನೂ ನಮಗೆ ಪ್ರಮಾಣ ಪತ್ರ ದೊರೆತಿಲ್ಲ. ಮುಂಬೈನ ಕೋಕಿಲಾಬೆನ್ ಧಿರುಬಾಯಿ ಅಂಬಾನಿ ಆಸ್ಪತ್ರೆಯಿಂದ ಲಸಿಕೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ನಮಗೆ ತಿಳಿಸಿದ್ದರು” ಎಂದು ನಿರ್ಮಾಪಕ ರಮೇಶ್ ತೌರಾನಿ ಹೇಳಿದ್ದಾರೆ.

’ನಮ್ಮ ಸಂಸ್ಥೆಯ 356 ಜನರಿಗೆ ಲಸಿಕೆ ನೀಡಲಾಗಿದೆ. ಪ್ರತಿ ಡೋಸ್‌ಗೆ 1,200 ರೂಪಾಯಿ ಪಾವತಿಸಿದ್ದೇವೆ. ಇದರ ಜೊತೆಗೆ ಹೆಚ್ಚುವರಿ ಜಿಎಸ್‌ಟಿ ಹಣವನ್ನು ನೀಡಲಾಗಿದೆ. ಆದರೆ, ಈಗ ಚಿಂತೆಗೆ ಈಡು ಮಾಡಿರುವುದು ಹಣವಲ್ಲ. ಲಸಿಕೆ ಎಂದು ನಮಗೆ ಏನು ನೀಡಿದ್ದಾರೆ ಎಂಬ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಇದು ನಿಜವಾದ ಕೋವಿಶೀಲ್ಡ್ ಅಥವಾ ಯಾವುದೋ ಲವಣಯುಕ್ತ ನೀರೇ? ಎಂಬ ಬಗ್ಗೆ ಅನುಮಾನ ಬಂದಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆಯನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಮೂಲಕ ವ್ಯಾಕ್ಸಿನೇಷನ್ ಶಿಬಿರವನ್ನು ಆಯೋಜಿಸಿದ ಕೆಲವು ವ್ಯಕ್ತಿಗಳು ಮೋಸ ಮಾಡಿದ್ದಾರೆ. ನಕಲಿ ಲಸಿಕೆ ನೀಡಿದ್ದಾರೆ ಎಂದು ಕಂಡಿವಲ್ಲಿ ಉಪನಗರದಲ್ಲಿನ ವಸತಿ ಸಂಘವು ಪೊಲೀಸರಿಗೆ ದೂರು ನೀಡಿತ್ತು. ಕೋವಿನ್ ಪೋರ್ಟಲ್‌ನಲ್ಲಿ ಇವರ ಯಾವುದೇ ದಾಖಲುಗಳು ಇಲ್ಲ ಎಂದು ದೂರು ನೀಡಿದ್ದಾರೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....