Homeಮುಖಪುಟಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

- Advertisement -
- Advertisement -

ಪ್ರಪಂಚದಾದ್ಯಂತ 16,000 ಪ್ರಕರಣಗಳು ಕಂಡುಬಂದರೂ ಭಾರತದಲ್ಲಿ ಇದುವರೆಗೂ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಇದು ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲವಾದ್ದರಿಂದ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ನೀತಿ ಆಯೋಗದ ತಜ್ಞರಾದ ಡಾ.ವಿ.ಕೆ ಪೌಲ್ ತಿಳಿಸಿದ್ದಾರೆ.

ಸರ್ವೇಕ್ಷಣೆಯನ್ನು ಹೆಚ್ಚು ಮಾಡಲಾಗಿದೆ. ಆದರೂ ನಿಮಗೆ ಅಥವಾ ನಿಮ್ಮ ಸ್ನೇಹಿತರಿಗೆ ಮಂಕಿಪಾಕ್ಸ್ ಖಾಯಿಲೆಯ ಲಕ್ಷಣಗಳು ಕಂಡುಬಂದರೆ ಅದನ್ನು ಮುಚ್ಚಿಡುವ ಬದಲು ವರದಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆಗ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ಯಾನ್ಸರ್‌ನಂತಹ ಇತರ ಕಾಯಿಲೆಗಳಿರುವ ರೋಗಿಗಳು ಇನ್ನೂ ಹೆಚ್ಚು ಜಾಗರೂಕರಾಗಿರಬೇಕು. ಆದರೆ ಯಾವುದೇ ಕಾರಣಕ್ಕೂ ಗಾಬರಿಯಾಗಬೇಡಿ. ಇದು ಕೋವಿಡ್‌ನಂತೆ ವೇಗವಾಗಿ ಹರಡುವ ರೋಗವಲ್ಲ. ಜೊತೆಗೆ ಸ್ವಯಂ ಚಿಕಿತ್ಸೆ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದ್ದು ತಪ್ಪದೇ ಆಸ್ಪತ್ರೆಗೆ ವರದಿ ಮಾಡಬೇಕು ಎಂದಿದ್ದಾರೆ.

ಭಾರತದಲ್ಲಿ ದೆಹಲಿ, ಕೇರಳ, ಉತ್ತರ ಪ್ರದೇಶ ಮತ್ತು ತೆಲಂಗಾಣದಲ್ಲಿ ತಲಾ ಒಂದೊಂದಿ ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. 74 ದೇಶಗಳಲ್ಲಿ 16,000 ಪ್ರಕರಣಗಳು ವರದಿಯಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಹೇರಿದೆ.

ಮಂಕಿಪಾಕ್ಸ್ ಸೋಂಕು:

ಮಂಕಿಪಾಕ್ಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುತ್ತದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್ವಿರಿಡೆ (Poxviridae) ಕುಟುಂಬದಲ್ಲಿ ಆರ್ಥೋಪಾಕ್ಸ್ (Orthopoxvirus) ವೈರಸ್ ಕುಲಕ್ಕೆ ಸೇರಿದೆ. ಆರ್ಥೋಪಾಕ್ಸ್‌ವೈರಸ್ ಕುಲವು ವೆರಿಯೊಲಾ ವೈರಸ್ (ಸಿಡುಬಿಗೆ ಕಾರಣವಾಗುತ್ತದೆ) ಎಂದು ಸಿಡಿಸಿ (Centers for Disease Control and Prevention) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಮಂಕಿಪಾಕ್ಸ್ ಸಾಮಾನ್ಯವಾಗಿ ಜ್ವರ, ತಲೆನೋವು ಮತ್ತು ಚರ್ಮದ ದದ್ದುಗಳನ್ನು ಒಳಗೊಂಡಿರುವ ರೋಗಲಕ್ಷಣಗಳೊಂದಿಗೆ ಉಂಟಾಗುವ ವೈರಲ್ ಸೋಂಕು. ಈ ಸೋಂಕು 1958 ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಮಧ್ಯ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳಲ್ಲಿನ ಜನರಲ್ಲಿ ಖಾಯಿಲೆ ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡು: ತಂದೆಯಿಂದಲೆ ನವವಿವಾಹಿತ ಮಗಳು, ಅಳಿಯನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...