Homeಮುಖಪುಟಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣಗಳು: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

- Advertisement -
- Advertisement -

ಪ್ರಪಂಚದಾದ್ಯಂತ 16,000 ಪ್ರಕರಣಗಳು ಕಂಡುಬಂದರೂ ಭಾರತದಲ್ಲಿ ಇದುವರೆಗೂ ನಾಲ್ಕು ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. ಇದು ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲವಾದ್ದರಿಂದ ಆತಂಕಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ನೀತಿ ಆಯೋಗದ ತಜ್ಞರಾದ ಡಾ.ವಿ.ಕೆ ಪೌಲ್ ತಿಳಿಸಿದ್ದಾರೆ.

ಸರ್ವೇಕ್ಷಣೆಯನ್ನು ಹೆಚ್ಚು ಮಾಡಲಾಗಿದೆ. ಆದರೂ ನಿಮಗೆ ಅಥವಾ ನಿಮ್ಮ ಸ್ನೇಹಿತರಿಗೆ ಮಂಕಿಪಾಕ್ಸ್ ಖಾಯಿಲೆಯ ಲಕ್ಷಣಗಳು ಕಂಡುಬಂದರೆ ಅದನ್ನು ಮುಚ್ಚಿಡುವ ಬದಲು ವರದಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆಗ ಚಿಕಿತ್ಸೆ ನೀಡುವುದು ಸುಲಭವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕ್ಯಾನ್ಸರ್‌ನಂತಹ ಇತರ ಕಾಯಿಲೆಗಳಿರುವ ರೋಗಿಗಳು ಇನ್ನೂ ಹೆಚ್ಚು ಜಾಗರೂಕರಾಗಿರಬೇಕು. ಆದರೆ ಯಾವುದೇ ಕಾರಣಕ್ಕೂ ಗಾಬರಿಯಾಗಬೇಡಿ. ಇದು ಕೋವಿಡ್‌ನಂತೆ ವೇಗವಾಗಿ ಹರಡುವ ರೋಗವಲ್ಲ. ಜೊತೆಗೆ ಸ್ವಯಂ ಚಿಕಿತ್ಸೆ ತೆಗೆದುಕೊಳ್ಳುವುದು ಅಪಾಯಕಾರಿಯಾಗಿದ್ದು ತಪ್ಪದೇ ಆಸ್ಪತ್ರೆಗೆ ವರದಿ ಮಾಡಬೇಕು ಎಂದಿದ್ದಾರೆ.

ಭಾರತದಲ್ಲಿ ದೆಹಲಿ, ಕೇರಳ, ಉತ್ತರ ಪ್ರದೇಶ ಮತ್ತು ತೆಲಂಗಾಣದಲ್ಲಿ ತಲಾ ಒಂದೊಂದಿ ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿವೆ. 74 ದೇಶಗಳಲ್ಲಿ 16,000 ಪ್ರಕರಣಗಳು ವರದಿಯಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಹೇರಿದೆ.

ಮಂಕಿಪಾಕ್ಸ್ ಸೋಂಕು:

ಮಂಕಿಪಾಕ್ಸ್ ಅಪರೂಪದ ಕಾಯಿಲೆಯಾಗಿದ್ದು, ಇದು ಮಂಕಿಪಾಕ್ಸ್ ವೈರಸ್ ಸೋಂಕಿನಿಂದ ಉಂಟಾಗುತ್ತದೆ. ಮಂಕಿಪಾಕ್ಸ್ ವೈರಸ್ ಪಾಕ್ಸ್ವಿರಿಡೆ (Poxviridae) ಕುಟುಂಬದಲ್ಲಿ ಆರ್ಥೋಪಾಕ್ಸ್ (Orthopoxvirus) ವೈರಸ್ ಕುಲಕ್ಕೆ ಸೇರಿದೆ. ಆರ್ಥೋಪಾಕ್ಸ್‌ವೈರಸ್ ಕುಲವು ವೆರಿಯೊಲಾ ವೈರಸ್ (ಸಿಡುಬಿಗೆ ಕಾರಣವಾಗುತ್ತದೆ) ಎಂದು ಸಿಡಿಸಿ (Centers for Disease Control and Prevention) ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಮಂಕಿಪಾಕ್ಸ್ ಸಾಮಾನ್ಯವಾಗಿ ಜ್ವರ, ತಲೆನೋವು ಮತ್ತು ಚರ್ಮದ ದದ್ದುಗಳನ್ನು ಒಳಗೊಂಡಿರುವ ರೋಗಲಕ್ಷಣಗಳೊಂದಿಗೆ ಉಂಟಾಗುವ ವೈರಲ್ ಸೋಂಕು. ಈ ಸೋಂಕು 1958 ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು. ಮಧ್ಯ ಮತ್ತು ಪಶ್ಚಿಮ ಆಫ್ರಿಕನ್ ದೇಶಗಳಲ್ಲಿನ ಜನರಲ್ಲಿ ಖಾಯಿಲೆ ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡು: ತಂದೆಯಿಂದಲೆ ನವವಿವಾಹಿತ ಮಗಳು, ಅಳಿಯನ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...