ದೆಹಲಿ- ಅಸ್ಸಾಂ ಕಾಮಾಖ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಬಿಹಾರದಲ್ಲಿ ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿ 9.35ರ ಸುಮಾರಿಗೆ ಬಕ್ಸರ್ ಬಳಿಯ ರಘುನಾಥಪುರ ನಿಲ್ದಾಣದ ಸಮೀಪ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ನಿಂದ ಹೊರಟ ರೈಲು ಅಸ್ಸಾಂನ ಗುವಾಹಟಿ ಬಳಿಯ ಕಾಮಾಖ್ಯಕ್ಕೆ ತೆರಳುತ್ತಿತ್ತು.
ರೈಲು ಸಂಖ್ಯೆ 12506ರಲ್ಲಿ ಹಲವು ಬೋಗಿಗಳು ರಾತ್ರಿ 9.35ರ ವೇಳೆಗೆ ದಾನಾಪುರ ವಿಭಾಗದ ರಘುನಾಥಪುರ ನಿಲ್ದಾಣ ಬಳಿ ಹಳಿತಪ್ಪಿವೆ ಎಂದು ಪೂರ್ವ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ತರುಣ್ ಪ್ರಕಾಶ್ ಹೇಳಿಕೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಳಿಕ ದುರಂತದ ಕಾರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆಯ ಕುರಿತು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಮಾತನಾಡಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಗಾಯಾಳುಗಳನ್ನು ಪಾಟ್ನಾದ ಏಮ್ಸ್ಗೆ ದಾಖಲಿಸಲಾಗಿದೆ.
ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ವಿಪತ್ತು ನಿರ್ವಹಣಾ ಇಲಾಖೆ, ಆರೋಗ್ಯ ಇಲಾಖೆ ಮತ್ತು ಬಕ್ಸರ್ ಮತ್ತು ಭೋಜ್ಪುರದ ಜಿಲ್ಲಾ ಅಧಿಕಾರಿಗಳೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯದ ಕುರಿತು ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಬಕ್ಸರ್ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದರು.
दिल्ली से कामख्या जा रही ट्रेन बक्सर के पास दुःखद ट्रेन दुर्घटना हुई है। हमारी स्वास्थ्य विभाग, आपदा विभाग के अधिकारियों एवं ज़िलाधिकारियों से बात हुई है। बक्सर, आरा, पटना के अस्पतलों को अलर्ट जारी किया है। बिहार पुलिस बल व SDRF को भी मौके पर भेजा है।
हमारी प्राथमिकता… pic.twitter.com/O28vaco3rQ— Tejashwi Yadav (@yadavtejashwi) October 11, 2023
ಇದನ್ನು ಓದಿ: ರಾಜಸ್ಥಾನ ವಿಧಾನಸಭಾ ಚುನಾವಣೆ ದಿನಾಂಕಗಳಲ್ಲಿ ಬದಲಾವಣೆ..