Homeಚಳವಳಿಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಪ್ರತಿಭಟನಾ ನಿರತ ರೈತರ ಮೇಲೆ ಉತ್ತರ ಪ್ರದೇಶದಲ್ಲಿ ನಡೆದ ಕ್ರೌರ್ಯ ಹಾಗೂ ಆನಂತರದ ರೈತರ ಪ್ರತಿರೋಧಕ್ಕೆ ಸಂಬಂಧಿಸಿದಂತಹ ಹತ್ತು ಅಂಶಗಳು...

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಮತ್ತು ಕೇಂದ್ರದ ಸಹಾಯಕ ಗೃಹಸಚಿವ ಅಜಯ್‌ ಮಿಶ್ರಾ ಅವರ ಭೇಟಿಯನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ಒಂಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ರೈತರ ಹತ್ಯೆಯಾಗಿದ್ದು, ನಂತರ ನಡೆದ ರೈತರ ಪ್ರತಿರೋಧದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

 ಹತ್ತು ಪ್ರಮುಖ ಅಂಶಗಳು

1. ಕೇಂದ್ರ ಸಹಾಯಕ ಗೃಹ ಸಚಿವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟಿಸುತ್ತಿದ್ದ ರೈತರ ಮೇಲೆ ಹರಿದಿವೆ. ಇದರಿಂದ ನಾಲ್ವರು ರೈತರು ಹುತಾತ್ಮರಾಗಿದ್ದಾರೆ. ಆಕ್ರೋಶಗೊಂಡ ರೈತರು ಎರಡು ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, ಅವುಗಳಿಗೆ ಬೆಂಕಿ ಹಂಚಿದ್ದಾರೆ ಎನ್ನಲಾಗಿದೆ. ಈ ಎಸ್‌ಯುವಿಗಳಲ್ಲಿ ಇದ್ದ ನಾಲ್ವರು ಮೃತಪಟ್ಟಿದ್ದಾರೆ ಎಂದು ಲಖಿಂಪುರ್‌-ಖೇರಿ ಜಿಲ್ಲಾ ದಂಡಾಧಿಕಾರಿ ಅರವಿಂದ ಕುಮಾರ್‌ ಚೌರಾಸಿಯಾ ತಿಳಿಸಿದ್ದಾರೆ.

2. ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾ ಅವರೇ ಒಂದು ಎಸ್‌‌ಯುವಿ ಚಾಲನೆ ಮಾಡುತ್ತಿದ್ದ ಎಂದು ರೈತರು ಆರೋಪಿಸಿದ್ದು, ಸಚಿವರು ರೈತರ ಆರೋಪವನ್ನು ಹಲ್ಲಗಳೆದಿದ್ದಾರೆ. ವಾಹನ ಹರಿದು ಮೂವರು ಸಾವನ್ನಪ್ಪಿದರೆ ಆಶಿಷ್‌ ಮಿಶ್ರಾ ಓರ್ವ ರೈತನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ವರದಿಗಳಾಗಿವೆ.

ಇದನ್ನೂ ಓದಿರಿ: ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆ: ಸಚಿವರ ಮೇಲೆ ಕೊಲೆ ಪ್ರಕರಣ ದಾಖಲಿಸಲು ಎಸ್‌ಕೆಎಂ ಒತ್ತಾಯ

3. “ಕೆಲವು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಕಪ್ಪು ಭಾವುಟವನ್ನು ತೋರಿಸುತ್ತಾ, ಕಲ್ಲುಗಳನ್ನು ಎಸೆದರು, ಇದು ಗಲಭೆಗೆ ತಿರುಗಿ, ಇಬ್ಬರು ರೈತರು ಕಾರಿನ ಅಡಿ ಬಂದು ಸಾವನ್ನಪ್ಪಿದರು. ಮೂವರು ಬಿಜೆಪಿ ಕಾರ್ಯಕರ್ತರು ಹಾಗೂ ಕಾರಿನ ಚಾಲಕನನ್ನು ಹೊಡೆದು ಸಾಯಿಸಲಾಯಿತು” ಎಂದು ಸಚಿವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

4. “ಸಚಿವರಿಗೆ ಘೇರಾವ್‌ ಹಾಕಲು  ರೈತರು ಉದ್ದೇಶಿಸಿದ್ದರು. ಘೇರಾವ್‌ ಕೊನೆಗೊಂಡ ನಂತರ ಹೆಚ್ಚಿನ ರೈತರು ಹಿಂತಿರುಗಿದ್ದರು. ಈ ವೇಳೆ ಮೂರು ಬೆಂಗಾವಲು ವಾಹನಗಳು ರೈತರ ಮೇಲೆ ನುಗ್ಗಿದವು. ಒಬ್ಬ ರೈತ ಸ್ಥಳದಲ್ಲೇ ಮೃತಪಟ್ಟರೆ, ಮತ್ತೆ ಕೆಲವರು ಆಸ್ಪತ್ರೆಯಲ್ಲಿ ಮೃತಪಟ್ಟರು” ಎಂದು ರೈತ ನಾಯಕ ದರ್ಶನ್‌ ಪಾಲ್‌ ಹೇಳಿದ್ದಾರೆ.

5. ವಾಹನಗಳು ನುಗ್ಗಿದ್ದರಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ ಒಕ್ಕೂಟದ ಭಾಗವಾದ ಸಂಯುಕ್ತ ಕಿಸಾನ್‌ ಮೋರ್ಚಾದ ನಾಯಕ ತೇಜೇಂದ್ರ ಎಸ್‌.ವಿರಾಕ್‌ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೈತ ಒಕ್ಕೂಟ ತಿಳಿಸಿದೆ.

6. ರೈತರು ಈ ಇಬ್ಬರು ಸಚಿವರ ಭೇಟಿಯನ್ನು ವಿರೋಧಿಸಿ ಒಂದೆಡೆ ಸೇರಿದ್ದರು.  ಇತ್ತೀಚೆಗೆ ರೈತರ ಹೋರಾಟದ ಕುರಿತು ಸಚಿವ ಮಿಶ್ರಾ ಅವಹೇಳನಕಾರಿಯಾಗಿ ಮಾತನಾಡಿದ್ದು ರೈತರ ಪ್ರತಿಭಟನೆಗೆ  ಕಾರಣವಾಗಿತ್ತು. ಕೃಷಿ ಕಾಯ್ದೆಗಳ ಕುರಿತು ಪ್ರತಿಭಟನೆಯನ್ನು ಸಚಿವರು ಕೇವಲವಾಗಿ ಕಂಡಿದ್ದರು. ಇದು ರೈತ ಸಮುದಾಯಕ್ಕೆ ಬೇಸರ ತಂದಿತ್ತು.

ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿಯನ್ನು ವಿರೋಧಿಸಿ ಉತ್ತರ ಪ್ರದೇಶದ ಲಿಖಿಮ್‌ಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಗಳು ಮೂವರು ರೈತರ ಮೇಲೆ ವಾಹನ ಹತ್ತಿಸಿದ್ದಾರೆ. ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸಂಯುಕ್ತಾ ಕಿಸಾನ್‌ ಮೋರ್ಚಾ ಹೇಳಿದೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವರ್ಚ್ಯೂವಲ್‌‌ ವೇದಿಕೆ ಮೂಲಕ ಪತ್ರಿಕಾಗೋಷ್ಠಿ ನಡೆಸಿರುವ ಸಂಯುಕ್ತಾ ಕಿಸಾನ್‌ ಮೋರ್ಚಾ, ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ.

ಘಟನಾ ಸ್ಥಳದಲ್ಲಿದ್ದ ಸೀತಾಪುರದ ರಿಚಾ ಸಿಂಗ್‌‌, “ಮಿಶ್ರಾ ಇಳಿಯಲಿರುವ ಹೆಲಿಪ್ಯಾಡ್‌ ಬಳಿ ರೈತರು ಸೇರಿದ್ದರು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದರು. ಮಿಶ್ರಾ ಬಂದಿಳಿದು ಕಾರ್ಯಕ್ರಮಕ್ಕೆ ತೆರಳಿದರು. ನಾವು ಅವರನ್ನು ಹಿಂಬಾಲಿಸಲಿಲ್ಲ. ನಮ್ಮ ಪ್ರತಿಭಟನೆಯನ್ನು ಹೆಲಿಪ್ಯಾಡ್‌ನಲ್ಲೇ ಮುಂದುವರಿಸಿದೆವು. ಕೆಲವರು ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಚಿವರು ಹೋದ ಬಳಿಕವೂ ನಮ್ಮ ಘೋಷಣೆಗಳನ್ನು ಕೂಗಿದೆವು. ನಂತರ ನಮ್ಮ ದಾರಿಯಲ್ಲಿ ನಾವು ನಡೆದೆವು” ಎಂದಿದ್ದಾರೆ.

ಗುಂಡಿನ ದಾಳಿ ಹಾಗೂ ಹತ್ಯೆ ನಡೆದಾಗ ಸ್ಥಳದಲ್ಲಿದ್ದ ರಿಚಾ ಸಿಂಗ್ ಜೊತೆ ಇದ್ದ ಗುರುಮ್ನೀತ್‌‌ ಮಂಗತ್‌ ಅವರೂ ಹೇಳಿಕೆ ನೀಡಿದ್ದು, “ಸಚಿವರು ಹೋದ ಬಳಿಕ ರೈತರು ಚದುರಿದರು. ಆ ವೇಳೆಗೆ ಸಚಿವರ ಮಗ ಆಶೀಶ್‌ ಮಿಶ್ರಾ, ಆತನ ಸಹೋದರ ಹಾಗೂ ಕೆಲವು ಗೂಂಡಾಗಳು ಮೂರು ಕಾರುಗಳಲ್ಲಿ ಸುಮಾರು 3.15ರ ವೇಳೆಗೆ ಬಂದರು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರು. ರೈತರ ಮೇಲೆ ನುಗ್ಗಿಸಿದರು. ಜೊತೆಗೆ ರೈತರ ಮೇಲೆ ಬಂದೂಕಿನ ಮಳೆಗರೆದರು. ಹತ್ತಿರದಲ್ಲಿದ್ದ ರೈತನಿಗೆ ಗುಂಡು ತಾಕಿ, ಆತ ಮೃತಪಟ್ಟ” ಎಂದು ಹೇಳಿದ್ದಾರೆ.

7. ಶಾಂತಿಯನ್ನು ಕಾಪಾಡಿಕೊಳ್ಳಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ಮನವಿ ಮಾಡಿದ್ದಾರೆ. ಘಟನೆಯನ್ನು ‘ಆಕಸ್ಮಿಕ’ ಎಂದು ಕರೆದಿರುವ ಅವರು, “ಘಟನೆಯ ಕಾರಣಗಳನ್ನು ತನಿಖೆ ಮಾಡಲಾಗುವುದು. ಆರೋಪಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಎಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಕೋರುತ್ತೇನೆ” ಎಂದಿದ್ದಾರೆ.

8. ಘಟನೆ ನಡೆದ ಲಿಖಿಂಪುರ್‌ ಪ್ರಾಂತ್ಯದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

9. ರೈತ ನಾಯಕ ನರೇಶ್ ಟಿಕಾಯತ್ ಅವರು ಭಾನುವಾರ ರಾತ್ರಿ ಸಿಸೋಲಿಯಲ್ಲಿ ತುರ್ತು ಸಭೆಯನ್ನು ಕರೆದಿದ್ದರು. ಮಾನವ ಹಕ್ಕುಗಳ ಹೋರಾಟಗಾರ ಚಂದ್ರಶೇಖರ್‌ ಆಜಾದ್ ಮತ್ತು ಇವರ ಭೀಮ್‌ ಆರ್ಮಿ ಲಿಖಿಂಪುರ್‌ ಖೇರಿಗೆ ದಾವಿಸುತ್ತಿದೆ ಎಂದು  ಎನ್‌ಡಿಟಿವಿ ವರದಿ ಮಾಡಿದೆ.

10. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕರಾದ ರಾಹುಲ್‌ ಗಾಂಧಿ, ರಣದೀಪ್‌ ಸರ್ಜೇವಾಲಾ, ಕಪೀಲ್‌ ಸಿಬಾಲ್‌ ಮೊದಲಾದವರು ಘಟನೆಯನ್ನು ಖಂಡಿಸಿದ್ದಾರೆ. ಕೊಲೆಯಾದ ರೈತರ ಕುಟುಂಬಗಳನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಯಿತು ಮತ್ತು ಲಖಿಂಪುರ್ ಖೇರಿಗೆ ಪ್ರವೇಶಿಸಲು ಬಿಡಲಿಲ್ಲ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. 

 ಇದನ್ನೂ ಓದಿರಿ: ಲಖಿಂಪುರ್ ಖೇರಿಯಲ್ಲಿ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ- ಭುಗಿಲೆದ್ದ ಹಿಂಸಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...