Homeಮುಖಪುಟಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

ಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇಂಫಾಲ್ ಪೂರ್ವದಲ್ಲಿರುವ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಣಿಪುರ ಪೊಲೀಸ್‌ನ ನಾಲ್ವರು ಸಿಬ್ಬಂದಿಯನ್ನು ಅಪಹರಿಸಿ, ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ ನಡೆಸಿದ ಆರೋಪದ ಮೇಲೆ ಮೈತೈ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ.

ಮೈತೈ ಗುಂಪು ಅರಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಸಿಬ್ಬಂದಿಗಳನ್ನು ಟಾರ್ಗೆಟ್‌ ಮಾಡಿ ಅಪಹರಣ ಮತ್ತು ಹಲ್ಲೆ ನಡೆಸುತ್ತಿದ್ದಾರೆ. ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಇಂದು ಬೆಳಿಗ್ಗೆ ಈ ಕುರಿತು ಮಣಿಪುರ ಪೊಲೀಸರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತೈಬಂಗಂಬ ಸನೌಜಮ್(25) ಮತ್ತು ಮೊಯರಂಗತೇಮ್ ಬೋಬೋ(40) ಅವರನ್ನು ಪೊಲೀಸ್‌ ಸಿಬ್ಬಂದಿಯ ಅಪಹರಣ ಮತ್ತು ದೈಹಿಕ ಹಲ್ಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಇಂಫಾಲ್ ಪೂರ್ವದಿಂದ ನಾಲ್ವರು ರಕ್ಷಣಾ ಪಡೆ ಸಿಬ್ಬಂದಿಗಳಾದ ರಾಮ್ ಬಹದ್ದೂರ್ ಕರ್ಕಿ, ರಮೇಶ್ ಬುಧಥೋಕಿ, ಮನೋಜ್ ಖತಿವೋಡಾ ಮತ್ತು ಎಂಡಿ ತಾಜ್ ಖಾನ್ ಕರ್ತವ್ಯದಲ್ಲಿದ್ದರು, ಅವರನ್ನು ತಡೆದು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಪೊಲೀಸ್ ಅಧಿಕಾರಿಯ ಪ್ರಕಾರ, ಶನಿವಾರ ಬೆಳಿಗ್ಗೆ ಇಂಫಾಲ್‌ನ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಕಮಾಂಡೋ ಕಾಂಪ್ಲೆಕ್ಸ್‌ನಿಂದ ಕೆಲವು ವಸ್ತುಗಳನ್ನು ಸಂಗ್ರಹಿಸಲು ನಾಲ್ವರನ್ನು ನಿಯೋಜಿಸಲಾಗಿತ್ತು. ನಾಲ್ವರು ಸಿಬ್ಬಂದಿಗಳು ಮೈತೈ ಅಥವಾ ಕುಕಿ ಸಮುದಾಯಕ್ಕೆ ಸೇರಿದವರಲ್ಲ. ಮೂವರು ನೇಪಾಳಿ ಸಮುದಾಯದವರಾಗಿದ್ದು, ಒಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ.

ಪೊಲೀಸರಿಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಅವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಅವರ ಮೊಬೈಲ್ ಫೋನ್‌ಗಳು ಮತ್ತು ಅವರಲ್ಲಿದ್ದ ಹಣವನ್ನು  ದೋಚಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ವಾಹನಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಅರಾಂಬೈ ತೆಂಗೋಲ್‌ ಸಂಘಟನೆಯ ಕೆಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇಂಫಾಲ್ ಪೂರ್ವದಲ್ಲಿ ಆ ಬಳಿಕ ಹೆಚ್ಚುವರಿ ಪೊಲೀಸ್ ಸೂಪರಿಂಡೆಂಟ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಲಾಗಿತ್ತು. ಬಳಿಕ ಅವರನ್ನು ರಕ್ಷಿಸಲಾಗಿದೆ.

ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯ ಮಣಿಪುರ  ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ. ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ನೂರಾರು ಜನರು ಕೊಲ್ಲಲ್ಪಟ್ಟಿದ್ದಾರೆ. ಹಲವಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಒಂದು ವರ್ಷದ ಹಿಂಸಾಚಾರ, ಜನರು ತಮ್ಮ ವ್ಯವಹಾರ, ಮನೆ, ಆಸ್ತಿ ಮತ್ತು ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವಂತೆ ಮಾಡಿದೆ. ರಾಜ್ಯ ಈ ಹಿಂದಿನಂತೆ ಶಾಂತಿಯುತ ಸಹಜ ಸ್ಥಿತಿಗೆ ಮರಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ.

ದಾಖಲೆಗಳ ಪ್ರಕಾರ, ಮಣಿಪುರ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ. ದೌರ್ಜನ್ಯದ ವರದಿಗಳು ಅತ್ಯಂತ ಭೀಕರವಾಗಿದೆ. ಹಿಂಸಾಚಾರದಿಂದ ರಾಜ್ಯ ಎರಡು ಭಾಗಗಳಾಗಿದ್ದು, ಭೂಮಿ ಮತ್ತು ಇತರ ಸೌಲಭ್ಯಗಳು ಮೈತೇಯಿ ಮತ್ತು ಕುಕಿ ಎಂಬ ಎರಡು ಸಮುದಾಯಗಳ ನಡುವೆ ಧಾರ್ಮಿಕ ಮತ್ತು ಜನಾಂಗೀಯ ರೇಖೆಗಳಲ್ಲಿ ವಿಂಗಡಣೆಯಾಗಿದೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...