Homeಮುಖಪುಟಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

ಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇಂಫಾಲ್ ಪೂರ್ವದಲ್ಲಿರುವ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಣಿಪುರ ಪೊಲೀಸ್‌ನ ನಾಲ್ವರು ಸಿಬ್ಬಂದಿಯನ್ನು ಅಪಹರಿಸಿ, ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ ನಡೆಸಿದ ಆರೋಪದ ಮೇಲೆ ಮೈತೈ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ.

ಮೈತೈ ಗುಂಪು ಅರಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಸಿಬ್ಬಂದಿಗಳನ್ನು ಟಾರ್ಗೆಟ್‌ ಮಾಡಿ ಅಪಹರಣ ಮತ್ತು ಹಲ್ಲೆ ನಡೆಸುತ್ತಿದ್ದಾರೆ. ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಇಂದು ಬೆಳಿಗ್ಗೆ ಈ ಕುರಿತು ಮಣಿಪುರ ಪೊಲೀಸರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತೈಬಂಗಂಬ ಸನೌಜಮ್(25) ಮತ್ತು ಮೊಯರಂಗತೇಮ್ ಬೋಬೋ(40) ಅವರನ್ನು ಪೊಲೀಸ್‌ ಸಿಬ್ಬಂದಿಯ ಅಪಹರಣ ಮತ್ತು ದೈಹಿಕ ಹಲ್ಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಇಂಫಾಲ್ ಪೂರ್ವದಿಂದ ನಾಲ್ವರು ರಕ್ಷಣಾ ಪಡೆ ಸಿಬ್ಬಂದಿಗಳಾದ ರಾಮ್ ಬಹದ್ದೂರ್ ಕರ್ಕಿ, ರಮೇಶ್ ಬುಧಥೋಕಿ, ಮನೋಜ್ ಖತಿವೋಡಾ ಮತ್ತು ಎಂಡಿ ತಾಜ್ ಖಾನ್ ಕರ್ತವ್ಯದಲ್ಲಿದ್ದರು, ಅವರನ್ನು ತಡೆದು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಪೊಲೀಸ್ ಅಧಿಕಾರಿಯ ಪ್ರಕಾರ, ಶನಿವಾರ ಬೆಳಿಗ್ಗೆ ಇಂಫಾಲ್‌ನ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಕಮಾಂಡೋ ಕಾಂಪ್ಲೆಕ್ಸ್‌ನಿಂದ ಕೆಲವು ವಸ್ತುಗಳನ್ನು ಸಂಗ್ರಹಿಸಲು ನಾಲ್ವರನ್ನು ನಿಯೋಜಿಸಲಾಗಿತ್ತು. ನಾಲ್ವರು ಸಿಬ್ಬಂದಿಗಳು ಮೈತೈ ಅಥವಾ ಕುಕಿ ಸಮುದಾಯಕ್ಕೆ ಸೇರಿದವರಲ್ಲ. ಮೂವರು ನೇಪಾಳಿ ಸಮುದಾಯದವರಾಗಿದ್ದು, ಒಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ.

ಪೊಲೀಸರಿಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಅವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಅವರ ಮೊಬೈಲ್ ಫೋನ್‌ಗಳು ಮತ್ತು ಅವರಲ್ಲಿದ್ದ ಹಣವನ್ನು  ದೋಚಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ವಾಹನಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಅರಾಂಬೈ ತೆಂಗೋಲ್‌ ಸಂಘಟನೆಯ ಕೆಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇಂಫಾಲ್ ಪೂರ್ವದಲ್ಲಿ ಆ ಬಳಿಕ ಹೆಚ್ಚುವರಿ ಪೊಲೀಸ್ ಸೂಪರಿಂಡೆಂಟ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಲಾಗಿತ್ತು. ಬಳಿಕ ಅವರನ್ನು ರಕ್ಷಿಸಲಾಗಿದೆ.

ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯ ಮಣಿಪುರ  ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ. ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ನೂರಾರು ಜನರು ಕೊಲ್ಲಲ್ಪಟ್ಟಿದ್ದಾರೆ. ಹಲವಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಒಂದು ವರ್ಷದ ಹಿಂಸಾಚಾರ, ಜನರು ತಮ್ಮ ವ್ಯವಹಾರ, ಮನೆ, ಆಸ್ತಿ ಮತ್ತು ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವಂತೆ ಮಾಡಿದೆ. ರಾಜ್ಯ ಈ ಹಿಂದಿನಂತೆ ಶಾಂತಿಯುತ ಸಹಜ ಸ್ಥಿತಿಗೆ ಮರಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ.

ದಾಖಲೆಗಳ ಪ್ರಕಾರ, ಮಣಿಪುರ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ. ದೌರ್ಜನ್ಯದ ವರದಿಗಳು ಅತ್ಯಂತ ಭೀಕರವಾಗಿದೆ. ಹಿಂಸಾಚಾರದಿಂದ ರಾಜ್ಯ ಎರಡು ಭಾಗಗಳಾಗಿದ್ದು, ಭೂಮಿ ಮತ್ತು ಇತರ ಸೌಲಭ್ಯಗಳು ಮೈತೇಯಿ ಮತ್ತು ಕುಕಿ ಎಂಬ ಎರಡು ಸಮುದಾಯಗಳ ನಡುವೆ ಧಾರ್ಮಿಕ ಮತ್ತು ಜನಾಂಗೀಯ ರೇಖೆಗಳಲ್ಲಿ ವಿಂಗಡಣೆಯಾಗಿದೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...