Homeಮುಖಪುಟಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

ಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇಂಫಾಲ್ ಪೂರ್ವದಲ್ಲಿರುವ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಣಿಪುರ ಪೊಲೀಸ್‌ನ ನಾಲ್ವರು ಸಿಬ್ಬಂದಿಯನ್ನು ಅಪಹರಿಸಿ, ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ ನಡೆಸಿದ ಆರೋಪದ ಮೇಲೆ ಮೈತೈ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ.

ಮೈತೈ ಗುಂಪು ಅರಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಸಿಬ್ಬಂದಿಗಳನ್ನು ಟಾರ್ಗೆಟ್‌ ಮಾಡಿ ಅಪಹರಣ ಮತ್ತು ಹಲ್ಲೆ ನಡೆಸುತ್ತಿದ್ದಾರೆ. ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಇಂದು ಬೆಳಿಗ್ಗೆ ಈ ಕುರಿತು ಮಣಿಪುರ ಪೊಲೀಸರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತೈಬಂಗಂಬ ಸನೌಜಮ್(25) ಮತ್ತು ಮೊಯರಂಗತೇಮ್ ಬೋಬೋ(40) ಅವರನ್ನು ಪೊಲೀಸ್‌ ಸಿಬ್ಬಂದಿಯ ಅಪಹರಣ ಮತ್ತು ದೈಹಿಕ ಹಲ್ಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಇಂಫಾಲ್ ಪೂರ್ವದಿಂದ ನಾಲ್ವರು ರಕ್ಷಣಾ ಪಡೆ ಸಿಬ್ಬಂದಿಗಳಾದ ರಾಮ್ ಬಹದ್ದೂರ್ ಕರ್ಕಿ, ರಮೇಶ್ ಬುಧಥೋಕಿ, ಮನೋಜ್ ಖತಿವೋಡಾ ಮತ್ತು ಎಂಡಿ ತಾಜ್ ಖಾನ್ ಕರ್ತವ್ಯದಲ್ಲಿದ್ದರು, ಅವರನ್ನು ತಡೆದು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಪೊಲೀಸ್ ಅಧಿಕಾರಿಯ ಪ್ರಕಾರ, ಶನಿವಾರ ಬೆಳಿಗ್ಗೆ ಇಂಫಾಲ್‌ನ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಕಮಾಂಡೋ ಕಾಂಪ್ಲೆಕ್ಸ್‌ನಿಂದ ಕೆಲವು ವಸ್ತುಗಳನ್ನು ಸಂಗ್ರಹಿಸಲು ನಾಲ್ವರನ್ನು ನಿಯೋಜಿಸಲಾಗಿತ್ತು. ನಾಲ್ವರು ಸಿಬ್ಬಂದಿಗಳು ಮೈತೈ ಅಥವಾ ಕುಕಿ ಸಮುದಾಯಕ್ಕೆ ಸೇರಿದವರಲ್ಲ. ಮೂವರು ನೇಪಾಳಿ ಸಮುದಾಯದವರಾಗಿದ್ದು, ಒಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ.

ಪೊಲೀಸರಿಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಅವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಅವರ ಮೊಬೈಲ್ ಫೋನ್‌ಗಳು ಮತ್ತು ಅವರಲ್ಲಿದ್ದ ಹಣವನ್ನು  ದೋಚಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ವಾಹನಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಅರಾಂಬೈ ತೆಂಗೋಲ್‌ ಸಂಘಟನೆಯ ಕೆಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇಂಫಾಲ್ ಪೂರ್ವದಲ್ಲಿ ಆ ಬಳಿಕ ಹೆಚ್ಚುವರಿ ಪೊಲೀಸ್ ಸೂಪರಿಂಡೆಂಟ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಲಾಗಿತ್ತು. ಬಳಿಕ ಅವರನ್ನು ರಕ್ಷಿಸಲಾಗಿದೆ.

ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯ ಮಣಿಪುರ  ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ. ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ನೂರಾರು ಜನರು ಕೊಲ್ಲಲ್ಪಟ್ಟಿದ್ದಾರೆ. ಹಲವಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಒಂದು ವರ್ಷದ ಹಿಂಸಾಚಾರ, ಜನರು ತಮ್ಮ ವ್ಯವಹಾರ, ಮನೆ, ಆಸ್ತಿ ಮತ್ತು ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವಂತೆ ಮಾಡಿದೆ. ರಾಜ್ಯ ಈ ಹಿಂದಿನಂತೆ ಶಾಂತಿಯುತ ಸಹಜ ಸ್ಥಿತಿಗೆ ಮರಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ.

ದಾಖಲೆಗಳ ಪ್ರಕಾರ, ಮಣಿಪುರ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ. ದೌರ್ಜನ್ಯದ ವರದಿಗಳು ಅತ್ಯಂತ ಭೀಕರವಾಗಿದೆ. ಹಿಂಸಾಚಾರದಿಂದ ರಾಜ್ಯ ಎರಡು ಭಾಗಗಳಾಗಿದ್ದು, ಭೂಮಿ ಮತ್ತು ಇತರ ಸೌಲಭ್ಯಗಳು ಮೈತೇಯಿ ಮತ್ತು ಕುಕಿ ಎಂಬ ಎರಡು ಸಮುದಾಯಗಳ ನಡುವೆ ಧಾರ್ಮಿಕ ಮತ್ತು ಜನಾಂಗೀಯ ರೇಖೆಗಳಲ್ಲಿ ವಿಂಗಡಣೆಯಾಗಿದೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...