Homeಮುಖಪುಟಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

ಮಣಿಪುರ: ನಾಲ್ವರು ಪೊಲೀಸರನ್ನು ಅಪಹರಿಸಿ ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ

- Advertisement -
- Advertisement -

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಮುಂದುವರಿದಿದ್ದು, ಇಂಫಾಲ್ ಪೂರ್ವದಲ್ಲಿರುವ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಣಿಪುರ ಪೊಲೀಸ್‌ನ ನಾಲ್ವರು ಸಿಬ್ಬಂದಿಯನ್ನು ಅಪಹರಿಸಿ, ಕಣ್ಣಿಗೆ ಬಟ್ಟೆ ಕಟ್ಟಿ ಹಲ್ಲೆ ನಡೆಸಿದ ಆರೋಪದ ಮೇಲೆ ಮೈತೈ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ.

ಮೈತೈ ಗುಂಪು ಅರಂಬೈ ತೆಂಗೋಲ್‌ನ ಸದಸ್ಯರು ಪೊಲೀಸ್ ಸಿಬ್ಬಂದಿಗಳನ್ನು ಟಾರ್ಗೆಟ್‌ ಮಾಡಿ ಅಪಹರಣ ಮತ್ತು ಹಲ್ಲೆ ನಡೆಸುತ್ತಿದ್ದಾರೆ. ಇದು ಈ ವರ್ಷದಲ್ಲಿ ನಡೆದ ಎರಡನೇ ಘಟನೆಯಾಗಿದೆ.

ಇಂದು ಬೆಳಿಗ್ಗೆ ಈ ಕುರಿತು ಮಣಿಪುರ ಪೊಲೀಸರು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ತೈಬಂಗಂಬ ಸನೌಜಮ್(25) ಮತ್ತು ಮೊಯರಂಗತೇಮ್ ಬೋಬೋ(40) ಅವರನ್ನು ಪೊಲೀಸ್‌ ಸಿಬ್ಬಂದಿಯ ಅಪಹರಣ ಮತ್ತು ದೈಹಿಕ ಹಲ್ಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ಮಧ್ಯಾಹ್ನ 12.30ರ ಸುಮಾರಿಗೆ ಇಂಫಾಲ್ ಪೂರ್ವದಿಂದ ನಾಲ್ವರು ರಕ್ಷಣಾ ಪಡೆ ಸಿಬ್ಬಂದಿಗಳಾದ ರಾಮ್ ಬಹದ್ದೂರ್ ಕರ್ಕಿ, ರಮೇಶ್ ಬುಧಥೋಕಿ, ಮನೋಜ್ ಖತಿವೋಡಾ ಮತ್ತು ಎಂಡಿ ತಾಜ್ ಖಾನ್ ಕರ್ತವ್ಯದಲ್ಲಿದ್ದರು, ಅವರನ್ನು ತಡೆದು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯ ಪೊಲೀಸ್ ಅಧಿಕಾರಿಯ ಪ್ರಕಾರ, ಶನಿವಾರ ಬೆಳಿಗ್ಗೆ ಇಂಫಾಲ್‌ನ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಕಮಾಂಡೋ ಕಾಂಪ್ಲೆಕ್ಸ್‌ನಿಂದ ಕೆಲವು ವಸ್ತುಗಳನ್ನು ಸಂಗ್ರಹಿಸಲು ನಾಲ್ವರನ್ನು ನಿಯೋಜಿಸಲಾಗಿತ್ತು. ನಾಲ್ವರು ಸಿಬ್ಬಂದಿಗಳು ಮೈತೈ ಅಥವಾ ಕುಕಿ ಸಮುದಾಯಕ್ಕೆ ಸೇರಿದವರಲ್ಲ. ಮೂವರು ನೇಪಾಳಿ ಸಮುದಾಯದವರಾಗಿದ್ದು, ಒಬ್ಬರು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ.

ಪೊಲೀಸರಿಗೆ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಅವರನ್ನು ನಂತರ ಬಿಡುಗಡೆ ಮಾಡಲಾಯಿತು ಆದರೆ ಅವರ ಮೊಬೈಲ್ ಫೋನ್‌ಗಳು ಮತ್ತು ಅವರಲ್ಲಿದ್ದ ಹಣವನ್ನು  ದೋಚಲಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ವಾಹನಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಅರಾಂಬೈ ತೆಂಗೋಲ್‌ ಸಂಘಟನೆಯ ಕೆಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇಂಫಾಲ್ ಪೂರ್ವದಲ್ಲಿ ಆ ಬಳಿಕ ಹೆಚ್ಚುವರಿ ಪೊಲೀಸ್ ಸೂಪರಿಂಡೆಂಟ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಪಹರಿಸಲಾಗಿತ್ತು. ಬಳಿಕ ಅವರನ್ನು ರಕ್ಷಿಸಲಾಗಿದೆ.

ಭಾರತದ ಈಶಾನ್ಯದಲ್ಲಿರುವ ಪ್ರಶಾಂತವಾದ ಬೆಟ್ಟ ಗುಡ್ಡಗಳಾವೃತ ಪುಟ್ಟ ರಾಜ್ಯ ಮಣಿಪುರ  ಮೇ 3, 2023ರಿಂದ ಹಿಂಸಾಚಾರದ ಸುಳಿಯಲ್ಲಿ ಸಿಲುಕಿ ಹೆಣಗಾಡುತ್ತಿದೆ. ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ನೂರಾರು ಜನರು ಕೊಲ್ಲಲ್ಪಟ್ಟಿದ್ದಾರೆ. ಹಲವಾರು ಮಂದಿ ಇನ್ನೂ ಕಾಣೆಯಾಗಿದ್ದಾರೆ. ಒಂದು ವರ್ಷದ ಹಿಂಸಾಚಾರ, ಜನರು ತಮ್ಮ ವ್ಯವಹಾರ, ಮನೆ, ಆಸ್ತಿ ಮತ್ತು ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವಂತೆ ಮಾಡಿದೆ. ರಾಜ್ಯ ಈ ಹಿಂದಿನಂತೆ ಶಾಂತಿಯುತ ಸಹಜ ಸ್ಥಿತಿಗೆ ಮರಳುವ ಲಕ್ಷಣ ಇನ್ನೂ ಕಾಣುತ್ತಿಲ್ಲ.

ದಾಖಲೆಗಳ ಪ್ರಕಾರ, ಮಣಿಪುರ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಮಂದಿ ಗಾಯಗೊಂಡಿದ್ದಾರೆ. ದೌರ್ಜನ್ಯದ ವರದಿಗಳು ಅತ್ಯಂತ ಭೀಕರವಾಗಿದೆ. ಹಿಂಸಾಚಾರದಿಂದ ರಾಜ್ಯ ಎರಡು ಭಾಗಗಳಾಗಿದ್ದು, ಭೂಮಿ ಮತ್ತು ಇತರ ಸೌಲಭ್ಯಗಳು ಮೈತೇಯಿ ಮತ್ತು ಕುಕಿ ಎಂಬ ಎರಡು ಸಮುದಾಯಗಳ ನಡುವೆ ಧಾರ್ಮಿಕ ಮತ್ತು ಜನಾಂಗೀಯ ರೇಖೆಗಳಲ್ಲಿ ವಿಂಗಡಣೆಯಾಗಿದೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...