Homeಮುಖಪುಟಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು.

- Advertisement -
- Advertisement -

ನಿನ್ನೆಯಷ್ಟೇ ಟಿಡಿಪಿಯ ನಾಲ್ವರು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದಾರೆ. ಇದರಲ್ಲಿ ಐ.ಸಿ.ಚೌಧರಿ ಮತ್ತು ಚಿ.ಎಂ ರಮೇಶ ಬಿಜೆಪಿಗೆ ಸೇರಿದ್ದಾರೆ ಎನ್ನುವುದಕ್ಕಿಂತ ಬಿಜೆಪಿಗೆ ಶರಣಾಗಿದ್ದಾರೆ ಅಥವಾ ಬಿಜೆಪಿ ಬ್ಲ್ಯಾಕ್‍ಮೇಲ್ ತಂತ್ರದಿಂದ ಈ ಇಬ್ಬರನ್ನು ಎಳೆದುಕೊಂಡಿದೆ ಎನ್ನುವುದೇ ಸೂಕ್ತ…. ಎನಿ ಹೌ ಥ್ಯಾಂಕ್ಸ್ ಟು ಸಿಬಿಐ, ಐಟಿ, ಇ,ಡಿ…… ತಿನ್ನಲ್ಲ, ತಿನ್ನಲು ಬಿಡಲ್ಲ ಅನ್ನುತ್ತಲೇ ತಿಂದು ಸಿಕ್ಕು ಹಾಕಿಕೊಂಡವರನ್ನು ಅಪ್ಪಿಗೊಳ್ಳುವ ಈ ವಿದ್ಯಾಮಾನ ಇನ್ನಷ್ಟು ವಿಸ್ತರಿಸುವ ಲಕ್ಷಣಗಳಿವೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಟಿಡಿಪಿ ಪಕ್ಷದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಬಿಜೆಪಿ ಎಗರಿಸಿದೆ. ವೈ.ಎಸ್ ಚೌಧರಿ, ಸಿಎಂ. ರಮೇಶ, ಗರಿಕಪತಿ ಮೋಹನರಾವ್ ಮತ್ತು ಟಿ.ಜಿ. ವೆಂಕಟೇಶ ಟಿಡಿಪಿ ತೊರೆದು ಅಮಿತ್‍ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಇವರಲ್ಲಿ ವೈ.ಎಸ್, ಚೌಧರಿ ಮತ್ತು ಸಿ.ಎಂ. ರಮೇಶ ಉದ್ಯಮಿಗಳೂ ಆಗಿದ್ದು ವಿವಿಧ ಹಣಕಾಸು ಹಗರಣಗಳಲ್ಲಿ ಈಟಿ, ಸಿಬಿಐ ಮತ್ತು ಜಾರಿದಳದ ತನಿಖೆ ಎದುರುಸುತ್ತಿದ್ದಾರೆ.

7-8 ತಿಂಗಳ ಹಿಂದೆಯಷ್ಟೇ ಇವರನ್ನು ‘ಆಂಧ್ರ ಮಲ್ಯ’ಗಳು ಎಂದಿದ್ದ ಬಿಜೆಪಿ ಇವರಿಬ್ಬರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯಸಭಾದ ಮುಖ್ಯಸ್ಥರಿಗೆ ಪತ್ರ ಬರೆದು ಒತ್ತಾಯಿಸಿತ್ತು. ಈಗಲೂ ಈ ಇಬ್ಬರಿಗೆ ಯಾವ ಕ್ಲೀನ್‍ಚಿಟ್ ಸಿಕ್ಕಿಲ್ಲ. ಆದರೆ ಈ ‘ಆಂಧ್ರ ಮಲ್ಯಗಳನ್ನು’ ಬಿಜೆಪಿ ಸೇರಿಸಿಕೊಂಡಿದೆ. ಗೊತ್ತಿದ್ದೇ ಈ ಇಬ್ಬರು ಇನ್ನು ನಿರಾಳರಾಗಲಿದ್ದಾರೆ..ಸ್ವಲ್ಪದರಲ್ಲೇ ಆರೋಪಮುಕ್ತರೂ ಆಗಲಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ತನ್ನ ಎದುರಾಳಿ ಪಡೆಗಳಿಂದ ಎಂಎಲ್‍ಎ, ಎಂಪಿಗಳನ್ನು ಸೆಳೆಯಲು ಸಿಬಿಐ, ಐಟಿ ಮತ್ತು ಇ,ಡಿ ಇಲಾಖೆಗಳನ್ನು ಬಿಜೆಪಿ ಬಳಸಿಕೊಂಡು ಬಂದಿದ್ದು ಈಗಾಗಲೇ ಕಣ್ಣೆದುರೇ ಇದೆ. 330ರಷ್ಟು ಎನ್‍ಡಿಎ ಬಲವಿದ್ದರೂ ಬಿಜೆಪಿಗೆ ಎಂಪಿಗಳ ಅಗತ್ಯವಿದೆ. ಏಕೆಂದರೆ ಅದಕ್ಕೆ ಈಗ ತುರ್ತಾಗಿ ಬೇಕಿರುವುದು ರಾಜ್ಯಸಭೆಗಳಲ್ಲಿ ಬಹುಮತ ತಲುಪುವುದು. ಸಂಘ ಪರಿವಾರದ ಅಜೆಂಡಾಗಳನ್ನು ಮಸೂದೆ ರೂಪದಲ್ಲಿ ಅಂಗೀಕರಿಸಲು ರಾಜ್ಯಸಭೆಯಲ್ಲು ಬಹುಮತ ಬೇಕು. ಈಗ ಅದು ರಾಜ್ಯಸಭೆಯತ್ತ ಗಮನ ನೀಡಿದೆ. ಮುಂಬರುವ ಹಲವು ವಿಧಾನಸಭೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗೆದ್ದರೆ, ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯ ಎಂಬ ಗುರಿಯೋಂದಿಗೆ ಅದು ಈಗಲೇ ಮುನ್ನುಗುತ್ತಿದೆ.

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು. ಆಗಲಿಂದಲೂ ಬಿಜೆಪಿ ಸೇರಿ ಪಾರಾಗಲು ಇವರ ಮೇಲೆ ಒತ್ತಡವಿತ್ತು. ಈಗ ಆಂಧ್ರದಲ್ಲಿ ಟಿಡಿಪಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡ ಮೇಲೆ ಈ ಇಬ್ಬರು ತನಿಖೆಯಿಂದ ಪಾರಾಗಲು ಬಿಜೆಪಿ ಸೇರಿದ್ದಾರೆ. ತನ್ನ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸಿದ್ದ ನಾಯ್ಡು ಮೇಲೇಯೂ ಬಿಜೆಪಿ ಸೇಡು ತೀರಿಸಿಕೊಂಡಿದೆ.

ಆಂಧ್ರ ಮಲ್ಯಗಳ ಅಪ್ಪುಗೆ
ಕಳೆದ ನವಂಬರ್ ನಲ್ಲಿ ಬಿಜೆಪಿ ಎಂಪಿ ಮತ್ತು ವಕ್ತಾರ ಜಿವಿಎಲ್ ನರಸಿಂಹರಾವ್  ಈ ಇಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದು ಅಪಾದಿಸಿ, ಇವರಿಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಲಿ ಎಂದು ರಾಜ್ಯಸಭಾದ ನೀತಿಸಂಹಿತೆ ಸಮಿತಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈಗ ಅದೇ ಮಲ್ಯಗಳು ಬಿಜೆಪಿಯ ದೇಶಭಕ್ತರು! ಹಿಂದಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅಂದಿನ ವಿಶೇಷಾಧಿಕಾರಿ ರಾಕೇಶ ಅಸ್ಥಾನಾ ನಡುವೆ ನಡಿದಿದ್ದ ಗದ್ದಲದಲ್ಲಿ ಟಿಡಿಪಿಯಲ್ಲಿದ್ದ ರಮೇಶ ಹೆಸರು ಕೇಳಿ ಬಂದಿತ್ತು. ಈತನ ಕಂಪನಿಯೊಂದರ ಮೇಲೆ ಐಟಿ ಇಲಾಖೆ ತನಿಖೆ ನಡೆಸುತ್ತಿತ್ತು. ಟಿಡಪಿಯಲ್ಲಿದ್ದ ಇನ್ನೊಬ್ಬ ಸದಸ್ಯ ಚೌಧರಿ ಮೇಲೆ ಬ್ಯಾಂಕುಗಳಿಗೆ ಮಾಡಿದ ಹಣಕಾಸು ವಂಚನೆಗಾಗಿ ಸಿಬಿಐ ಮತ್ತು ಇ.ಡಿ., ಸಂಸ್ಥೆಗಳು ಕಣ್ಣಿಟ್ಟಿದ್ದವು.

ಕಳೆದ ಅಕ್ಟೋಬರ್‍ನಲ್ಲಿ ರಮೇಶನಿಗೆ ಸಂಬಂಧಿಸಿದ ಕಂಪನಿ ರಿತ್ವಿಕ್ ಪ್ರಾಜೆಕ್ಟ್ಸ್‍ನಲ್ಲಿ ನೂರು ಕೋಟಿ ಮೌಲ್ಯದ ಸಂಶಯಾಸ್ಪದ ವಹಿವಾಟನ್ನು ಐಟಿ ಇಲಾಖೆ ಪತ್ತೆ ಹಚ್ಚಿತ್ತು. ಅದರಲ್ಲಿ ಗುರುತಿಸಲಾಗದ ವಹಿವಾಟಿನಿಂದ 75 ಕೋಟಿಗಳನ್ನು ಮತ್ತು ಸಂಶಯಾಸ್ಪದ 27 ಕೋಟಿಗಳ ಅಪರಾ ತಪರಾ ನಡೆದಿರುವುದನ್ನು ಐಟಿ ಗುರುತಿಸಿತ್ತು. ಕಳೆದ ಅಕ್ಟೋಬರ್ 12ರಂದು ರಮೇಶನ ಕಡಪಾ ಮನೆ ಮತ್ತು ಹೈದರಾಬಾದ್ ಕಚೇರಿ ಮೇಲೆ ಐಟಿ ದಾಳಿ ನಡೆಸಿತ್ತು. ಸಿಬಿಐನ ಅಧಿಕಾರಿಗಳ ಜಗಳದಲ್ಲಿ ಈ ಎಂಪಿ ರಮೇಶನ ವಿಷಯವೂ ಬಂದು, ಈತ ಆ ಅಧಿಕಾರಿಗಳನ್ನು ‘ಫಿಕ್ಸ್’ ಮಾಡಲು ಯತ್ನಿಸಿದ್ದಾನೆ ಎಂದು ಸಾಕ್ಷಿಯೊದು ಆಪಾದಿಸಿತ್ತು.

ಟಿಡಿಪಿ ಮೋದಿ-1 ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳುವ ಮೊದಲು ಚೌಧರಿ ಎನ್‍ಡಿಎ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದರು. ನಂತರ ಈ ಚೌಧರಿಯ ಮೇಲೆ ಸಿಬಿಐ ಮೂರು ಎಫ್‍ಐಆರ್‍ ಗಳನ್ನು ದಾಖಲಿಸಿದೆ. ಚೌಧರಿಗೆ ಸೇರಿದ ವಿದ್ಯುತ್ ತಯಾರಿಸುವ ಬೆಸ್ಟ್ ಕ್ರಾಂಪ್ಟನ್ ಕಂಪನಿಯು ಬ್ಯಾಂಕಿಂಗ್ ವಲಯದಿಂದ 360 ಕೋಟಿ ಸಾಲ ಪಡೆದು ವಂಚಿಸಿದೆ ಎಂದು ಎಫ್‍ಆರ್‍ಐನಲ್ಲೆ ಆರೋಪಿಸಲಾಗಿದೆ. ಸಿಬಿಐ ಮಾಹಿತಿಯ ಆಧಾರದಲ್ಲಿ ಇ.ಡಿ ಕೂಡ ಚೌಧರಿ ಮೇಲೆ ಕೇಸು ದಾಖಲಿಸಿ ತನಿಖೆ ನಡೆಸುತ್ತಿದೆ. ಕಳೆದ ಅಕ್ಟೋಬರರ್ 2ರಂದು ಹೈದಾರಾಬಾದ್‍ನ ಚೌಧರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ 12 ವಂಚಕ ಕಂಪನಿಗಳ ಸೀಲ್‍ಗಳು ಮತ್ತು ದಾಖಲೆಗಳನ್ನು ವಶ ಮಾಡಿಕೊಂಡಿತ್ತು. ಚೌಧರಿಯ ಸುಜನಾ ಕಂಪನಿಯ ಮೇಲೂ 5,700 ಕೋಟಿಗಳ ವಂಚನೆಯ ಕುರಿತೂ ಇ.ಡಿ ತನಿಖೆ ನಡೆಸುತ್ತಿದೆ.

ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ಚೌಧರಿ ಮತ್ತು ರಮೇಶರ ಮೇಲಿನ ತನಿಖೆ ಇನ್ನೂ ಮುಗಿದಿಲ್ಲ. ಆಗ ‘ಆಂಧ್ರ ಮಲ್ಯ’ಗಳಾಗಿದ್ದ ಇವರಿಬ್ಬರೂ ಈಗ ದೇಶಭಕ್ತರಾಗಿ ಬದಲಾಗಿದ್ದಾರೆಯೇ ಎಂಬ ಪ್ರಶ್ನೆಗೆ ‘ಜೈ ಶ್ರೀರಾಮ್’ ಎಂಬ ಉತ್ತರವೇ ಬರಬಹುದೇನೋ?

ಸಿಬಿಐ, ಇಡಿ ಮತ್ತು ಐಟಿ ಇಲಾಖೆಗಳನ್ನು ಬಳಸಿಕೊಂಡು ವಂಚಕ ಜನಪ್ರತಿನಿಧಿಗಳನ್ನು ತನ್ನತ್ತು ಸೆಳೆಯುವ ‘ಮೋಡಸ್ ಆಪರೆಂಡಿ’ಯನ್ನು ಬಿಜೆಪಿ ಅನುಸರಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಶಾರದಾ ಚಿಟ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಟಿಎಂಸಿಯ ಮುಕುಲ್‍ರಾಯ್ ಮತ್ತು ಇತರರನ್ನು ಸೇರಿಸಿಕೊಂಡ ಬಿಜೆಪಿ ನಂತರದಲ್ಲಿ ಅವರನ್ನೇ ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ ಮಮತ ವಿರುದ್ಧ ತನ್ನ ನೆಲೆಯನ್ನು ಗಟ್ಟಿ ಮಾಡಿಕೊಂಡಿತ್ತು. ಹೀಗೆ ಬಿಜೆಪಿ ಸೇರುವ ಮಲ್ಯಗಳು ತನಿಖೆಗಳಿಂದ ಬಚಾವಾಗುತ್ತಲಿದ್ದಾರೆ, ಮುಂದೆ ಸಂಪೂರ್ಣ ಆರೋಪಮುಕ್ತರೂ ಆಗುತ್ತಾರೆ.

ವಿಜಯ ಮಲ್ಯ, ನೀರವ್ ಮೋದಿ ಬಿಜೆಪಿಗೆ ಸೇರ್ಪಡೆಗೊಂಡರೆ ದೇಶಭಕ್ತರಾಗುವ ಅವಕಾಶಗಳು ಉಂಟೇನೋ?
(ಆಧಾರ: ಇಂಡಿಯನ್ ಎಕ್ಸ್‍ಪ್ರೆಸ್)

ಇದನ್ನು ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...