Homeಮುಖಪುಟಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು.

- Advertisement -
- Advertisement -

ನಿನ್ನೆಯಷ್ಟೇ ಟಿಡಿಪಿಯ ನಾಲ್ವರು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದಾರೆ. ಇದರಲ್ಲಿ ಐ.ಸಿ.ಚೌಧರಿ ಮತ್ತು ಚಿ.ಎಂ ರಮೇಶ ಬಿಜೆಪಿಗೆ ಸೇರಿದ್ದಾರೆ ಎನ್ನುವುದಕ್ಕಿಂತ ಬಿಜೆಪಿಗೆ ಶರಣಾಗಿದ್ದಾರೆ ಅಥವಾ ಬಿಜೆಪಿ ಬ್ಲ್ಯಾಕ್‍ಮೇಲ್ ತಂತ್ರದಿಂದ ಈ ಇಬ್ಬರನ್ನು ಎಳೆದುಕೊಂಡಿದೆ ಎನ್ನುವುದೇ ಸೂಕ್ತ…. ಎನಿ ಹೌ ಥ್ಯಾಂಕ್ಸ್ ಟು ಸಿಬಿಐ, ಐಟಿ, ಇ,ಡಿ…… ತಿನ್ನಲ್ಲ, ತಿನ್ನಲು ಬಿಡಲ್ಲ ಅನ್ನುತ್ತಲೇ ತಿಂದು ಸಿಕ್ಕು ಹಾಕಿಕೊಂಡವರನ್ನು ಅಪ್ಪಿಗೊಳ್ಳುವ ಈ ವಿದ್ಯಾಮಾನ ಇನ್ನಷ್ಟು ವಿಸ್ತರಿಸುವ ಲಕ್ಷಣಗಳಿವೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಟಿಡಿಪಿ ಪಕ್ಷದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಬಿಜೆಪಿ ಎಗರಿಸಿದೆ. ವೈ.ಎಸ್ ಚೌಧರಿ, ಸಿಎಂ. ರಮೇಶ, ಗರಿಕಪತಿ ಮೋಹನರಾವ್ ಮತ್ತು ಟಿ.ಜಿ. ವೆಂಕಟೇಶ ಟಿಡಿಪಿ ತೊರೆದು ಅಮಿತ್‍ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಇವರಲ್ಲಿ ವೈ.ಎಸ್, ಚೌಧರಿ ಮತ್ತು ಸಿ.ಎಂ. ರಮೇಶ ಉದ್ಯಮಿಗಳೂ ಆಗಿದ್ದು ವಿವಿಧ ಹಣಕಾಸು ಹಗರಣಗಳಲ್ಲಿ ಈಟಿ, ಸಿಬಿಐ ಮತ್ತು ಜಾರಿದಳದ ತನಿಖೆ ಎದುರುಸುತ್ತಿದ್ದಾರೆ.

7-8 ತಿಂಗಳ ಹಿಂದೆಯಷ್ಟೇ ಇವರನ್ನು ‘ಆಂಧ್ರ ಮಲ್ಯ’ಗಳು ಎಂದಿದ್ದ ಬಿಜೆಪಿ ಇವರಿಬ್ಬರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯಸಭಾದ ಮುಖ್ಯಸ್ಥರಿಗೆ ಪತ್ರ ಬರೆದು ಒತ್ತಾಯಿಸಿತ್ತು. ಈಗಲೂ ಈ ಇಬ್ಬರಿಗೆ ಯಾವ ಕ್ಲೀನ್‍ಚಿಟ್ ಸಿಕ್ಕಿಲ್ಲ. ಆದರೆ ಈ ‘ಆಂಧ್ರ ಮಲ್ಯಗಳನ್ನು’ ಬಿಜೆಪಿ ಸೇರಿಸಿಕೊಂಡಿದೆ. ಗೊತ್ತಿದ್ದೇ ಈ ಇಬ್ಬರು ಇನ್ನು ನಿರಾಳರಾಗಲಿದ್ದಾರೆ..ಸ್ವಲ್ಪದರಲ್ಲೇ ಆರೋಪಮುಕ್ತರೂ ಆಗಲಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ತನ್ನ ಎದುರಾಳಿ ಪಡೆಗಳಿಂದ ಎಂಎಲ್‍ಎ, ಎಂಪಿಗಳನ್ನು ಸೆಳೆಯಲು ಸಿಬಿಐ, ಐಟಿ ಮತ್ತು ಇ,ಡಿ ಇಲಾಖೆಗಳನ್ನು ಬಿಜೆಪಿ ಬಳಸಿಕೊಂಡು ಬಂದಿದ್ದು ಈಗಾಗಲೇ ಕಣ್ಣೆದುರೇ ಇದೆ. 330ರಷ್ಟು ಎನ್‍ಡಿಎ ಬಲವಿದ್ದರೂ ಬಿಜೆಪಿಗೆ ಎಂಪಿಗಳ ಅಗತ್ಯವಿದೆ. ಏಕೆಂದರೆ ಅದಕ್ಕೆ ಈಗ ತುರ್ತಾಗಿ ಬೇಕಿರುವುದು ರಾಜ್ಯಸಭೆಗಳಲ್ಲಿ ಬಹುಮತ ತಲುಪುವುದು. ಸಂಘ ಪರಿವಾರದ ಅಜೆಂಡಾಗಳನ್ನು ಮಸೂದೆ ರೂಪದಲ್ಲಿ ಅಂಗೀಕರಿಸಲು ರಾಜ್ಯಸಭೆಯಲ್ಲು ಬಹುಮತ ಬೇಕು. ಈಗ ಅದು ರಾಜ್ಯಸಭೆಯತ್ತ ಗಮನ ನೀಡಿದೆ. ಮುಂಬರುವ ಹಲವು ವಿಧಾನಸಭೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗೆದ್ದರೆ, ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯ ಎಂಬ ಗುರಿಯೋಂದಿಗೆ ಅದು ಈಗಲೇ ಮುನ್ನುಗುತ್ತಿದೆ.

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು. ಆಗಲಿಂದಲೂ ಬಿಜೆಪಿ ಸೇರಿ ಪಾರಾಗಲು ಇವರ ಮೇಲೆ ಒತ್ತಡವಿತ್ತು. ಈಗ ಆಂಧ್ರದಲ್ಲಿ ಟಿಡಿಪಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡ ಮೇಲೆ ಈ ಇಬ್ಬರು ತನಿಖೆಯಿಂದ ಪಾರಾಗಲು ಬಿಜೆಪಿ ಸೇರಿದ್ದಾರೆ. ತನ್ನ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸಿದ್ದ ನಾಯ್ಡು ಮೇಲೇಯೂ ಬಿಜೆಪಿ ಸೇಡು ತೀರಿಸಿಕೊಂಡಿದೆ.

ಆಂಧ್ರ ಮಲ್ಯಗಳ ಅಪ್ಪುಗೆ
ಕಳೆದ ನವಂಬರ್ ನಲ್ಲಿ ಬಿಜೆಪಿ ಎಂಪಿ ಮತ್ತು ವಕ್ತಾರ ಜಿವಿಎಲ್ ನರಸಿಂಹರಾವ್  ಈ ಇಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದು ಅಪಾದಿಸಿ, ಇವರಿಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಲಿ ಎಂದು ರಾಜ್ಯಸಭಾದ ನೀತಿಸಂಹಿತೆ ಸಮಿತಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈಗ ಅದೇ ಮಲ್ಯಗಳು ಬಿಜೆಪಿಯ ದೇಶಭಕ್ತರು! ಹಿಂದಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅಂದಿನ ವಿಶೇಷಾಧಿಕಾರಿ ರಾಕೇಶ ಅಸ್ಥಾನಾ ನಡುವೆ ನಡಿದಿದ್ದ ಗದ್ದಲದಲ್ಲಿ ಟಿಡಿಪಿಯಲ್ಲಿದ್ದ ರಮೇಶ ಹೆಸರು ಕೇಳಿ ಬಂದಿತ್ತು. ಈತನ ಕಂಪನಿಯೊಂದರ ಮೇಲೆ ಐಟಿ ಇಲಾಖೆ ತನಿಖೆ ನಡೆಸುತ್ತಿತ್ತು. ಟಿಡಪಿಯಲ್ಲಿದ್ದ ಇನ್ನೊಬ್ಬ ಸದಸ್ಯ ಚೌಧರಿ ಮೇಲೆ ಬ್ಯಾಂಕುಗಳಿಗೆ ಮಾಡಿದ ಹಣಕಾಸು ವಂಚನೆಗಾಗಿ ಸಿಬಿಐ ಮತ್ತು ಇ.ಡಿ., ಸಂಸ್ಥೆಗಳು ಕಣ್ಣಿಟ್ಟಿದ್ದವು.

ಕಳೆದ ಅಕ್ಟೋಬರ್‍ನಲ್ಲಿ ರಮೇಶನಿಗೆ ಸಂಬಂಧಿಸಿದ ಕಂಪನಿ ರಿತ್ವಿಕ್ ಪ್ರಾಜೆಕ್ಟ್ಸ್‍ನಲ್ಲಿ ನೂರು ಕೋಟಿ ಮೌಲ್ಯದ ಸಂಶಯಾಸ್ಪದ ವಹಿವಾಟನ್ನು ಐಟಿ ಇಲಾಖೆ ಪತ್ತೆ ಹಚ್ಚಿತ್ತು. ಅದರಲ್ಲಿ ಗುರುತಿಸಲಾಗದ ವಹಿವಾಟಿನಿಂದ 75 ಕೋಟಿಗಳನ್ನು ಮತ್ತು ಸಂಶಯಾಸ್ಪದ 27 ಕೋಟಿಗಳ ಅಪರಾ ತಪರಾ ನಡೆದಿರುವುದನ್ನು ಐಟಿ ಗುರುತಿಸಿತ್ತು. ಕಳೆದ ಅಕ್ಟೋಬರ್ 12ರಂದು ರಮೇಶನ ಕಡಪಾ ಮನೆ ಮತ್ತು ಹೈದರಾಬಾದ್ ಕಚೇರಿ ಮೇಲೆ ಐಟಿ ದಾಳಿ ನಡೆಸಿತ್ತು. ಸಿಬಿಐನ ಅಧಿಕಾರಿಗಳ ಜಗಳದಲ್ಲಿ ಈ ಎಂಪಿ ರಮೇಶನ ವಿಷಯವೂ ಬಂದು, ಈತ ಆ ಅಧಿಕಾರಿಗಳನ್ನು ‘ಫಿಕ್ಸ್’ ಮಾಡಲು ಯತ್ನಿಸಿದ್ದಾನೆ ಎಂದು ಸಾಕ್ಷಿಯೊದು ಆಪಾದಿಸಿತ್ತು.

ಟಿಡಿಪಿ ಮೋದಿ-1 ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳುವ ಮೊದಲು ಚೌಧರಿ ಎನ್‍ಡಿಎ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದರು. ನಂತರ ಈ ಚೌಧರಿಯ ಮೇಲೆ ಸಿಬಿಐ ಮೂರು ಎಫ್‍ಐಆರ್‍ ಗಳನ್ನು ದಾಖಲಿಸಿದೆ. ಚೌಧರಿಗೆ ಸೇರಿದ ವಿದ್ಯುತ್ ತಯಾರಿಸುವ ಬೆಸ್ಟ್ ಕ್ರಾಂಪ್ಟನ್ ಕಂಪನಿಯು ಬ್ಯಾಂಕಿಂಗ್ ವಲಯದಿಂದ 360 ಕೋಟಿ ಸಾಲ ಪಡೆದು ವಂಚಿಸಿದೆ ಎಂದು ಎಫ್‍ಆರ್‍ಐನಲ್ಲೆ ಆರೋಪಿಸಲಾಗಿದೆ. ಸಿಬಿಐ ಮಾಹಿತಿಯ ಆಧಾರದಲ್ಲಿ ಇ.ಡಿ ಕೂಡ ಚೌಧರಿ ಮೇಲೆ ಕೇಸು ದಾಖಲಿಸಿ ತನಿಖೆ ನಡೆಸುತ್ತಿದೆ. ಕಳೆದ ಅಕ್ಟೋಬರರ್ 2ರಂದು ಹೈದಾರಾಬಾದ್‍ನ ಚೌಧರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ 12 ವಂಚಕ ಕಂಪನಿಗಳ ಸೀಲ್‍ಗಳು ಮತ್ತು ದಾಖಲೆಗಳನ್ನು ವಶ ಮಾಡಿಕೊಂಡಿತ್ತು. ಚೌಧರಿಯ ಸುಜನಾ ಕಂಪನಿಯ ಮೇಲೂ 5,700 ಕೋಟಿಗಳ ವಂಚನೆಯ ಕುರಿತೂ ಇ.ಡಿ ತನಿಖೆ ನಡೆಸುತ್ತಿದೆ.

ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ಚೌಧರಿ ಮತ್ತು ರಮೇಶರ ಮೇಲಿನ ತನಿಖೆ ಇನ್ನೂ ಮುಗಿದಿಲ್ಲ. ಆಗ ‘ಆಂಧ್ರ ಮಲ್ಯ’ಗಳಾಗಿದ್ದ ಇವರಿಬ್ಬರೂ ಈಗ ದೇಶಭಕ್ತರಾಗಿ ಬದಲಾಗಿದ್ದಾರೆಯೇ ಎಂಬ ಪ್ರಶ್ನೆಗೆ ‘ಜೈ ಶ್ರೀರಾಮ್’ ಎಂಬ ಉತ್ತರವೇ ಬರಬಹುದೇನೋ?

ಸಿಬಿಐ, ಇಡಿ ಮತ್ತು ಐಟಿ ಇಲಾಖೆಗಳನ್ನು ಬಳಸಿಕೊಂಡು ವಂಚಕ ಜನಪ್ರತಿನಿಧಿಗಳನ್ನು ತನ್ನತ್ತು ಸೆಳೆಯುವ ‘ಮೋಡಸ್ ಆಪರೆಂಡಿ’ಯನ್ನು ಬಿಜೆಪಿ ಅನುಸರಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಶಾರದಾ ಚಿಟ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಟಿಎಂಸಿಯ ಮುಕುಲ್‍ರಾಯ್ ಮತ್ತು ಇತರರನ್ನು ಸೇರಿಸಿಕೊಂಡ ಬಿಜೆಪಿ ನಂತರದಲ್ಲಿ ಅವರನ್ನೇ ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ ಮಮತ ವಿರುದ್ಧ ತನ್ನ ನೆಲೆಯನ್ನು ಗಟ್ಟಿ ಮಾಡಿಕೊಂಡಿತ್ತು. ಹೀಗೆ ಬಿಜೆಪಿ ಸೇರುವ ಮಲ್ಯಗಳು ತನಿಖೆಗಳಿಂದ ಬಚಾವಾಗುತ್ತಲಿದ್ದಾರೆ, ಮುಂದೆ ಸಂಪೂರ್ಣ ಆರೋಪಮುಕ್ತರೂ ಆಗುತ್ತಾರೆ.

ವಿಜಯ ಮಲ್ಯ, ನೀರವ್ ಮೋದಿ ಬಿಜೆಪಿಗೆ ಸೇರ್ಪಡೆಗೊಂಡರೆ ದೇಶಭಕ್ತರಾಗುವ ಅವಕಾಶಗಳು ಉಂಟೇನೋ?
(ಆಧಾರ: ಇಂಡಿಯನ್ ಎಕ್ಸ್‍ಪ್ರೆಸ್)

ಇದನ್ನು ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...