Homeಮುಖಪುಟಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಬಿಜೆಪಿಗೆ ‘ಶರಣಾದ’ ನಾಲ್ವರು ಟಿಡಿಪಿ ಎಂಪಿಗಳು. ಇವರಿಲ್ಲಿಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದಿತ್ತು ಬಿಜೆಪಿ!

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು.

- Advertisement -
- Advertisement -

ನಿನ್ನೆಯಷ್ಟೇ ಟಿಡಿಪಿಯ ನಾಲ್ವರು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದ್ದಾರೆ. ಇದರಲ್ಲಿ ಐ.ಸಿ.ಚೌಧರಿ ಮತ್ತು ಚಿ.ಎಂ ರಮೇಶ ಬಿಜೆಪಿಗೆ ಸೇರಿದ್ದಾರೆ ಎನ್ನುವುದಕ್ಕಿಂತ ಬಿಜೆಪಿಗೆ ಶರಣಾಗಿದ್ದಾರೆ ಅಥವಾ ಬಿಜೆಪಿ ಬ್ಲ್ಯಾಕ್‍ಮೇಲ್ ತಂತ್ರದಿಂದ ಈ ಇಬ್ಬರನ್ನು ಎಳೆದುಕೊಂಡಿದೆ ಎನ್ನುವುದೇ ಸೂಕ್ತ…. ಎನಿ ಹೌ ಥ್ಯಾಂಕ್ಸ್ ಟು ಸಿಬಿಐ, ಐಟಿ, ಇ,ಡಿ…… ತಿನ್ನಲ್ಲ, ತಿನ್ನಲು ಬಿಡಲ್ಲ ಅನ್ನುತ್ತಲೇ ತಿಂದು ಸಿಕ್ಕು ಹಾಕಿಕೊಂಡವರನ್ನು ಅಪ್ಪಿಗೊಳ್ಳುವ ಈ ವಿದ್ಯಾಮಾನ ಇನ್ನಷ್ಟು ವಿಸ್ತರಿಸುವ ಲಕ್ಷಣಗಳಿವೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರ ಟಿಡಿಪಿ ಪಕ್ಷದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಬಿಜೆಪಿ ಎಗರಿಸಿದೆ. ವೈ.ಎಸ್ ಚೌಧರಿ, ಸಿಎಂ. ರಮೇಶ, ಗರಿಕಪತಿ ಮೋಹನರಾವ್ ಮತ್ತು ಟಿ.ಜಿ. ವೆಂಕಟೇಶ ಟಿಡಿಪಿ ತೊರೆದು ಅಮಿತ್‍ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಇವರಲ್ಲಿ ವೈ.ಎಸ್, ಚೌಧರಿ ಮತ್ತು ಸಿ.ಎಂ. ರಮೇಶ ಉದ್ಯಮಿಗಳೂ ಆಗಿದ್ದು ವಿವಿಧ ಹಣಕಾಸು ಹಗರಣಗಳಲ್ಲಿ ಈಟಿ, ಸಿಬಿಐ ಮತ್ತು ಜಾರಿದಳದ ತನಿಖೆ ಎದುರುಸುತ್ತಿದ್ದಾರೆ.

7-8 ತಿಂಗಳ ಹಿಂದೆಯಷ್ಟೇ ಇವರನ್ನು ‘ಆಂಧ್ರ ಮಲ್ಯ’ಗಳು ಎಂದಿದ್ದ ಬಿಜೆಪಿ ಇವರಿಬ್ಬರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯಸಭಾದ ಮುಖ್ಯಸ್ಥರಿಗೆ ಪತ್ರ ಬರೆದು ಒತ್ತಾಯಿಸಿತ್ತು. ಈಗಲೂ ಈ ಇಬ್ಬರಿಗೆ ಯಾವ ಕ್ಲೀನ್‍ಚಿಟ್ ಸಿಕ್ಕಿಲ್ಲ. ಆದರೆ ಈ ‘ಆಂಧ್ರ ಮಲ್ಯಗಳನ್ನು’ ಬಿಜೆಪಿ ಸೇರಿಸಿಕೊಂಡಿದೆ. ಗೊತ್ತಿದ್ದೇ ಈ ಇಬ್ಬರು ಇನ್ನು ನಿರಾಳರಾಗಲಿದ್ದಾರೆ..ಸ್ವಲ್ಪದರಲ್ಲೇ ಆರೋಪಮುಕ್ತರೂ ಆಗಲಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ತನ್ನ ಎದುರಾಳಿ ಪಡೆಗಳಿಂದ ಎಂಎಲ್‍ಎ, ಎಂಪಿಗಳನ್ನು ಸೆಳೆಯಲು ಸಿಬಿಐ, ಐಟಿ ಮತ್ತು ಇ,ಡಿ ಇಲಾಖೆಗಳನ್ನು ಬಿಜೆಪಿ ಬಳಸಿಕೊಂಡು ಬಂದಿದ್ದು ಈಗಾಗಲೇ ಕಣ್ಣೆದುರೇ ಇದೆ. 330ರಷ್ಟು ಎನ್‍ಡಿಎ ಬಲವಿದ್ದರೂ ಬಿಜೆಪಿಗೆ ಎಂಪಿಗಳ ಅಗತ್ಯವಿದೆ. ಏಕೆಂದರೆ ಅದಕ್ಕೆ ಈಗ ತುರ್ತಾಗಿ ಬೇಕಿರುವುದು ರಾಜ್ಯಸಭೆಗಳಲ್ಲಿ ಬಹುಮತ ತಲುಪುವುದು. ಸಂಘ ಪರಿವಾರದ ಅಜೆಂಡಾಗಳನ್ನು ಮಸೂದೆ ರೂಪದಲ್ಲಿ ಅಂಗೀಕರಿಸಲು ರಾಜ್ಯಸಭೆಯಲ್ಲು ಬಹುಮತ ಬೇಕು. ಈಗ ಅದು ರಾಜ್ಯಸಭೆಯತ್ತ ಗಮನ ನೀಡಿದೆ. ಮುಂಬರುವ ಹಲವು ವಿಧಾನಸಭೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗೆದ್ದರೆ, ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಸಾಧ್ಯ ಎಂಬ ಗುರಿಯೋಂದಿಗೆ ಅದು ಈಗಲೇ ಮುನ್ನುಗುತ್ತಿದೆ.

ಚಂದ್ರಬಾಬು ನಾಯ್ಡು ಎನ್‍ಡಿಎ ಜೊತೆಗಿದ್ದಾಗ ಚೌಧರಿ ಮತ್ತು ರಮೇಶರ ಮೇಲೆ ಯಾವ ಕೇಸುಗಳನ್ನು ಹಾಕಿರಲಿಲ್ಲ. ನಾಯ್ಡು ಎನ್‍ಡಿಎ ತೊರೆದ ನಂತರ ಸಿಬಿಐ, ಇ.ಡಿ ಮತ್ತು ಐಟಿ ಇಲಾಖೆಗಳು ಈ ಇಬ್ಬರು ಎಂಪಿ ಕಂ ಉದ್ಯಮಿಗಳ ಹಿಂದೆ ಬಿದ್ದವು. ಆಗಲಿಂದಲೂ ಬಿಜೆಪಿ ಸೇರಿ ಪಾರಾಗಲು ಇವರ ಮೇಲೆ ಒತ್ತಡವಿತ್ತು. ಈಗ ಆಂಧ್ರದಲ್ಲಿ ಟಿಡಿಪಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡ ಮೇಲೆ ಈ ಇಬ್ಬರು ತನಿಖೆಯಿಂದ ಪಾರಾಗಲು ಬಿಜೆಪಿ ಸೇರಿದ್ದಾರೆ. ತನ್ನ ವಿರುದ್ಧ ವಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸಿದ್ದ ನಾಯ್ಡು ಮೇಲೇಯೂ ಬಿಜೆಪಿ ಸೇಡು ತೀರಿಸಿಕೊಂಡಿದೆ.

ಆಂಧ್ರ ಮಲ್ಯಗಳ ಅಪ್ಪುಗೆ
ಕಳೆದ ನವಂಬರ್ ನಲ್ಲಿ ಬಿಜೆಪಿ ಎಂಪಿ ಮತ್ತು ವಕ್ತಾರ ಜಿವಿಎಲ್ ನರಸಿಂಹರಾವ್  ಈ ಇಬ್ಬರನ್ನು ‘ಆಂಧ್ರ ಮಲ್ಯಗಳು’ ಎಂದು ಅಪಾದಿಸಿ, ಇವರಿಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಲಿ ಎಂದು ರಾಜ್ಯಸಭಾದ ನೀತಿಸಂಹಿತೆ ಸಮಿತಿಗೆ ಪತ್ರ ಬರೆದು ಒತ್ತಾಯಿಸಿದ್ದರು. ಈಗ ಅದೇ ಮಲ್ಯಗಳು ಬಿಜೆಪಿಯ ದೇಶಭಕ್ತರು! ಹಿಂದಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ಅಂದಿನ ವಿಶೇಷಾಧಿಕಾರಿ ರಾಕೇಶ ಅಸ್ಥಾನಾ ನಡುವೆ ನಡಿದಿದ್ದ ಗದ್ದಲದಲ್ಲಿ ಟಿಡಿಪಿಯಲ್ಲಿದ್ದ ರಮೇಶ ಹೆಸರು ಕೇಳಿ ಬಂದಿತ್ತು. ಈತನ ಕಂಪನಿಯೊಂದರ ಮೇಲೆ ಐಟಿ ಇಲಾಖೆ ತನಿಖೆ ನಡೆಸುತ್ತಿತ್ತು. ಟಿಡಪಿಯಲ್ಲಿದ್ದ ಇನ್ನೊಬ್ಬ ಸದಸ್ಯ ಚೌಧರಿ ಮೇಲೆ ಬ್ಯಾಂಕುಗಳಿಗೆ ಮಾಡಿದ ಹಣಕಾಸು ವಂಚನೆಗಾಗಿ ಸಿಬಿಐ ಮತ್ತು ಇ.ಡಿ., ಸಂಸ್ಥೆಗಳು ಕಣ್ಣಿಟ್ಟಿದ್ದವು.

ಕಳೆದ ಅಕ್ಟೋಬರ್‍ನಲ್ಲಿ ರಮೇಶನಿಗೆ ಸಂಬಂಧಿಸಿದ ಕಂಪನಿ ರಿತ್ವಿಕ್ ಪ್ರಾಜೆಕ್ಟ್ಸ್‍ನಲ್ಲಿ ನೂರು ಕೋಟಿ ಮೌಲ್ಯದ ಸಂಶಯಾಸ್ಪದ ವಹಿವಾಟನ್ನು ಐಟಿ ಇಲಾಖೆ ಪತ್ತೆ ಹಚ್ಚಿತ್ತು. ಅದರಲ್ಲಿ ಗುರುತಿಸಲಾಗದ ವಹಿವಾಟಿನಿಂದ 75 ಕೋಟಿಗಳನ್ನು ಮತ್ತು ಸಂಶಯಾಸ್ಪದ 27 ಕೋಟಿಗಳ ಅಪರಾ ತಪರಾ ನಡೆದಿರುವುದನ್ನು ಐಟಿ ಗುರುತಿಸಿತ್ತು. ಕಳೆದ ಅಕ್ಟೋಬರ್ 12ರಂದು ರಮೇಶನ ಕಡಪಾ ಮನೆ ಮತ್ತು ಹೈದರಾಬಾದ್ ಕಚೇರಿ ಮೇಲೆ ಐಟಿ ದಾಳಿ ನಡೆಸಿತ್ತು. ಸಿಬಿಐನ ಅಧಿಕಾರಿಗಳ ಜಗಳದಲ್ಲಿ ಈ ಎಂಪಿ ರಮೇಶನ ವಿಷಯವೂ ಬಂದು, ಈತ ಆ ಅಧಿಕಾರಿಗಳನ್ನು ‘ಫಿಕ್ಸ್’ ಮಾಡಲು ಯತ್ನಿಸಿದ್ದಾನೆ ಎಂದು ಸಾಕ್ಷಿಯೊದು ಆಪಾದಿಸಿತ್ತು.

ಟಿಡಿಪಿ ಮೋದಿ-1 ಸರ್ಕಾರಕ್ಕೆ ಬೆಂಬಲ ಹಿಂತೆಗೆದುಕೊಳ್ಳುವ ಮೊದಲು ಚೌಧರಿ ಎನ್‍ಡಿಎ ಸರ್ಕಾರದಲ್ಲಿ ರಾಜ್ಯ ಸಚಿವರಾಗಿದ್ದರು. ನಂತರ ಈ ಚೌಧರಿಯ ಮೇಲೆ ಸಿಬಿಐ ಮೂರು ಎಫ್‍ಐಆರ್‍ ಗಳನ್ನು ದಾಖಲಿಸಿದೆ. ಚೌಧರಿಗೆ ಸೇರಿದ ವಿದ್ಯುತ್ ತಯಾರಿಸುವ ಬೆಸ್ಟ್ ಕ್ರಾಂಪ್ಟನ್ ಕಂಪನಿಯು ಬ್ಯಾಂಕಿಂಗ್ ವಲಯದಿಂದ 360 ಕೋಟಿ ಸಾಲ ಪಡೆದು ವಂಚಿಸಿದೆ ಎಂದು ಎಫ್‍ಆರ್‍ಐನಲ್ಲೆ ಆರೋಪಿಸಲಾಗಿದೆ. ಸಿಬಿಐ ಮಾಹಿತಿಯ ಆಧಾರದಲ್ಲಿ ಇ.ಡಿ ಕೂಡ ಚೌಧರಿ ಮೇಲೆ ಕೇಸು ದಾಖಲಿಸಿ ತನಿಖೆ ನಡೆಸುತ್ತಿದೆ. ಕಳೆದ ಅಕ್ಟೋಬರರ್ 2ರಂದು ಹೈದಾರಾಬಾದ್‍ನ ಚೌಧರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ 12 ವಂಚಕ ಕಂಪನಿಗಳ ಸೀಲ್‍ಗಳು ಮತ್ತು ದಾಖಲೆಗಳನ್ನು ವಶ ಮಾಡಿಕೊಂಡಿತ್ತು. ಚೌಧರಿಯ ಸುಜನಾ ಕಂಪನಿಯ ಮೇಲೂ 5,700 ಕೋಟಿಗಳ ವಂಚನೆಯ ಕುರಿತೂ ಇ.ಡಿ ತನಿಖೆ ನಡೆಸುತ್ತಿದೆ.

ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ಚೌಧರಿ ಮತ್ತು ರಮೇಶರ ಮೇಲಿನ ತನಿಖೆ ಇನ್ನೂ ಮುಗಿದಿಲ್ಲ. ಆಗ ‘ಆಂಧ್ರ ಮಲ್ಯ’ಗಳಾಗಿದ್ದ ಇವರಿಬ್ಬರೂ ಈಗ ದೇಶಭಕ್ತರಾಗಿ ಬದಲಾಗಿದ್ದಾರೆಯೇ ಎಂಬ ಪ್ರಶ್ನೆಗೆ ‘ಜೈ ಶ್ರೀರಾಮ್’ ಎಂಬ ಉತ್ತರವೇ ಬರಬಹುದೇನೋ?

ಸಿಬಿಐ, ಇಡಿ ಮತ್ತು ಐಟಿ ಇಲಾಖೆಗಳನ್ನು ಬಳಸಿಕೊಂಡು ವಂಚಕ ಜನಪ್ರತಿನಿಧಿಗಳನ್ನು ತನ್ನತ್ತು ಸೆಳೆಯುವ ‘ಮೋಡಸ್ ಆಪರೆಂಡಿ’ಯನ್ನು ಬಿಜೆಪಿ ಅನುಸರಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಶಾರದಾ ಚಿಟ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಟಿಎಂಸಿಯ ಮುಕುಲ್‍ರಾಯ್ ಮತ್ತು ಇತರರನ್ನು ಸೇರಿಸಿಕೊಂಡ ಬಿಜೆಪಿ ನಂತರದಲ್ಲಿ ಅವರನ್ನೇ ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ ಮಮತ ವಿರುದ್ಧ ತನ್ನ ನೆಲೆಯನ್ನು ಗಟ್ಟಿ ಮಾಡಿಕೊಂಡಿತ್ತು. ಹೀಗೆ ಬಿಜೆಪಿ ಸೇರುವ ಮಲ್ಯಗಳು ತನಿಖೆಗಳಿಂದ ಬಚಾವಾಗುತ್ತಲಿದ್ದಾರೆ, ಮುಂದೆ ಸಂಪೂರ್ಣ ಆರೋಪಮುಕ್ತರೂ ಆಗುತ್ತಾರೆ.

ವಿಜಯ ಮಲ್ಯ, ನೀರವ್ ಮೋದಿ ಬಿಜೆಪಿಗೆ ಸೇರ್ಪಡೆಗೊಂಡರೆ ದೇಶಭಕ್ತರಾಗುವ ಅವಕಾಶಗಳು ಉಂಟೇನೋ?
(ಆಧಾರ: ಇಂಡಿಯನ್ ಎಕ್ಸ್‍ಪ್ರೆಸ್)

ಇದನ್ನು ಓದಿ: ರಿಯಲ್ ಎಸ್ಟೇಟ್ ಹಗರಣದ ಕೇಸಿನಿಂದ ಬಚಾವಾಗಲು ಬಿಜೆಪಿ ಸೇರಿದರಾ ಗೌತಮ್ ಗಂಭೀರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...