Homeಸಿನಿಮಾಕ್ರೀಡೆ4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

- Advertisement -
- Advertisement -

ಕರ್ನಾಟಕದ ಮಾಜಿ ಆಟಗಾರ್ತಿ ಮತ್ತು ಹಾಲಿ ಜರ್ಮನಿ ತಂಡದ ನಾಯಕಿ ಅನುರಾಧ ದೊಡ್ಡಬಳ್ಳಾಪುರ ಆಸ್ಟ್ರಿಯಾ ವಿರುದ್ಧದ ಮಹಿಳಾ ಟಿ20 ಪಂದ್ಯದಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಗಳಿಸುವ ಮೂಲಕ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

ಆಗಸ್ಟ್ 14ರಂದು ಲೋಯರ್ ಆಸ್ಟ್ರಿಯಾದಲ್ಲಿ ನಡೆದ ನಾಲ್ಕನೇ ಮಹಿಳಾ ಟಿ20 ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಅವರ ಈ ಅಮೋಘ ಆಟದ ನೆರವಿನಿಂದ ಜರ್ಮನಿಯು ಆಸ್ಟ್ರಿಯಾವನ್ನು 137 ರನ್‌ಗಳಿಂದ ಮಣಿಸಿದೆ. ಆ ಮೂಲಕ 4 ಎಸೆತಗಳಲ್ಲಿ 4 ವಿಕೆಟ್ ಪಡೆದ ಪ್ರಥಮ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಅನುರಾಧ ದೊಡ್ಡಬಳ್ಳಾಪುರ ಭಾಜನರಾಗಿದ್ದಾರೆ.

ಶ್ರೀಲಂಕಾದ ಲಸಿತ್ ಮಾಲಿಂಗ ಮತ್ತು ಆಫ್ಘಾನಿಸ್ಥಾನದ ರಶೀದ್‌ ಖಾನ್‌ರವರ ಈ ಸಾಧನೆಯ ಅಪರೂಪದ ಪಟ್ಟಿಗೆ 33 ವರ್ಷದ ಅನುರಾಧ ದೊಡ್ಡಬಳ್ಳಾಪುರ ಸೇರಿದ್ದಾರೆ. ಲಸಿತ್ ಮಾಲಿಂಗ 2007ರ ಐಸಿಸಿ ವಿಶ್ವಕಪ್‌ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 4 ಎಸೆತಗಳಲ್ಲಿ 4 ವಿಕೆಟ್ ಗಳಿಸಿ ಸಾಧನೆಗೈದರೆ, 2019ರ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ರಶೀದ್ ಖಾನ್ 4 ಎಸೆತಗಳಲ್ಲಿ 4 ವಿಕೆಟ್ ಪಡೆದಿದ್ದರು.

ಶುಕ್ರವಾರ ನಡೆದ ಪಂದ್ಯದಲ್ಲಿ ಜರ್ಮನಿ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 198 ರನ್ ಗಳಿಸಿದರೆ, ಉತ್ತರವಾಗಿ ಆಸ್ಟ್ರಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 61 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆಸ್ಟ್ರಿಯಾದ ಜೋ-ಆಂಟೊನೆಟ್ ಸ್ಟಿಗ್ಲಿಟ್ಜ್ (1), ಟಗ್ಸೆ ಕಜಾಂಸಿ (0), ಅನಿಷಾ ನೂಕಲಾ (0) ಮತ್ತು ಪ್ರಿಯಾ ಸಾಬು (0) ಅನುರಾಧ ದಾಳಿಗೆ ತತ್ತರಿಸಿದ ಆಟಗಾರರಾಗಿದ್ದಾರೆ.

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

ಈ ಹಿಂದೆ ಕರ್ನಾಟಕ ತಂಡದ ಪರವಾಗಿದ್ದ ಆಡಿದ್ದ ಅನುರಾಧ, ಮಧ್ಯಮವೇಗಿಯಾಗಿ ಹೆಸರು ಗಳಿಸಿದ್ದರು. ಈಗ ಜರ್ಮನಿ ತಂಡವನ್ನು ಮುನ್ನೆಡೆಸುತ್ತಿದ್ದು ವಿಶಿಷ್ಠ ಸಾಧನೆ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...