Homeಸಿನಿಮಾಕ್ರೀಡೆ4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

4 ಎಸೆತಗಳಲ್ಲಿ 4 ವಿಕೆಟ್!: ದಾಖಲೆ ಬರೆದ ಕನ್ನಡದ ಹುಡುಗಿ ಅನುರಾಧ ದೊಡ್ಡಬಳ್ಳಾಪುರ

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

- Advertisement -
- Advertisement -

ಕರ್ನಾಟಕದ ಮಾಜಿ ಆಟಗಾರ್ತಿ ಮತ್ತು ಹಾಲಿ ಜರ್ಮನಿ ತಂಡದ ನಾಯಕಿ ಅನುರಾಧ ದೊಡ್ಡಬಳ್ಳಾಪುರ ಆಸ್ಟ್ರಿಯಾ ವಿರುದ್ಧದ ಮಹಿಳಾ ಟಿ20 ಪಂದ್ಯದಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಗಳಿಸುವ ಮೂಲಕ ವಿಶ್ವದಾಖಲೆ ಸ್ಥಾಪಿಸಿದ್ದಾರೆ.

ಆಗಸ್ಟ್ 14ರಂದು ಲೋಯರ್ ಆಸ್ಟ್ರಿಯಾದಲ್ಲಿ ನಡೆದ ನಾಲ್ಕನೇ ಮಹಿಳಾ ಟಿ20 ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಅವರ ಈ ಅಮೋಘ ಆಟದ ನೆರವಿನಿಂದ ಜರ್ಮನಿಯು ಆಸ್ಟ್ರಿಯಾವನ್ನು 137 ರನ್‌ಗಳಿಂದ ಮಣಿಸಿದೆ. ಆ ಮೂಲಕ 4 ಎಸೆತಗಳಲ್ಲಿ 4 ವಿಕೆಟ್ ಪಡೆದ ಪ್ರಥಮ ಮಹಿಳಾ ಆಟಗಾರ್ತಿ ಎಂಬ ಕೀರ್ತಿಗೆ ಅನುರಾಧ ದೊಡ್ಡಬಳ್ಳಾಪುರ ಭಾಜನರಾಗಿದ್ದಾರೆ.

ಶ್ರೀಲಂಕಾದ ಲಸಿತ್ ಮಾಲಿಂಗ ಮತ್ತು ಆಫ್ಘಾನಿಸ್ಥಾನದ ರಶೀದ್‌ ಖಾನ್‌ರವರ ಈ ಸಾಧನೆಯ ಅಪರೂಪದ ಪಟ್ಟಿಗೆ 33 ವರ್ಷದ ಅನುರಾಧ ದೊಡ್ಡಬಳ್ಳಾಪುರ ಸೇರಿದ್ದಾರೆ. ಲಸಿತ್ ಮಾಲಿಂಗ 2007ರ ಐಸಿಸಿ ವಿಶ್ವಕಪ್‌ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 4 ಎಸೆತಗಳಲ್ಲಿ 4 ವಿಕೆಟ್ ಗಳಿಸಿ ಸಾಧನೆಗೈದರೆ, 2019ರ ಐರ್ಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ರಶೀದ್ ಖಾನ್ 4 ಎಸೆತಗಳಲ್ಲಿ 4 ವಿಕೆಟ್ ಪಡೆದಿದ್ದರು.

ಶುಕ್ರವಾರ ನಡೆದ ಪಂದ್ಯದಲ್ಲಿ ಜರ್ಮನಿ 20 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 198 ರನ್ ಗಳಿಸಿದರೆ, ಉತ್ತರವಾಗಿ ಆಸ್ಟ್ರಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 61 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆಸ್ಟ್ರಿಯಾದ ಜೋ-ಆಂಟೊನೆಟ್ ಸ್ಟಿಗ್ಲಿಟ್ಜ್ (1), ಟಗ್ಸೆ ಕಜಾಂಸಿ (0), ಅನಿಷಾ ನೂಕಲಾ (0) ಮತ್ತು ಪ್ರಿಯಾ ಸಾಬು (0) ಅನುರಾಧ ದಾಳಿಗೆ ತತ್ತರಿಸಿದ ಆಟಗಾರರಾಗಿದ್ದಾರೆ.

ಅನುರಾಧ ದೊಡ್ಡಬಳ್ಳಾಪುರ 3 ಒವರ್‌ಗಳಲ್ಲಿ ಕೇವಲ 1 ರನ್ ನೀಡಿ  5 ವಿಕೆಟ್‌ಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಇದು ಕೂಡ ದಾಖಲೆ ಪಟ್ಟಿಗೆ ಸೇರಿದೆ.

ಈ ಹಿಂದೆ ಕರ್ನಾಟಕ ತಂಡದ ಪರವಾಗಿದ್ದ ಆಡಿದ್ದ ಅನುರಾಧ, ಮಧ್ಯಮವೇಗಿಯಾಗಿ ಹೆಸರು ಗಳಿಸಿದ್ದರು. ಈಗ ಜರ್ಮನಿ ತಂಡವನ್ನು ಮುನ್ನೆಡೆಸುತ್ತಿದ್ದು ವಿಶಿಷ್ಠ ಸಾಧನೆ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.


ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...